Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಬಳಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿರುವ ಕನ್ನಡದ ಮೊದಲ ಸಿನಿಮಾವಿದು
ಕೊರೊನಾ ಲಾಕ್ ಡೌನ್ ಬಳಿಕ ಚಿತ್ರಮಂದಿರಗಳು ಮತ್ತೆ ಓಪನ್ ಆಗುತ್ತಿವೆ. ಸುಮಾರು 7 ತಿಂಗಳುಗಳ ಕಾಲ ಮುಚ್ಚಿದ್ದ ಚಿತ್ರಮಂದಿರಗಳು ಇದೀಗ ಸಿನಿಮಾ ಪ್ರದರ್ಶನಕ್ಕೆ ಸಿದ್ಧವಾಗುತ್ತಿವೆ. ಸ್ಯಾಂಡಲ್ ವುಡ್ ನಲ್ಲಿಯೂ ಸಿನಿಮಾಗಳು ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ತಯಾರಿ ಮಾಡಿಕೊಳ್ಳುತ್ತಿವೆ.
ಕೊರೊನಾ ಬಳಿಕ ಕನ್ನಡದಲ್ಲಿ ರಿಲೀಸ್ ಆಗುತ್ತಿರುವ ಮೊದಲ ಸಿನಿಮಾ 'ರಣಂ'. ಚಿರಂಜೀವಿ ಸರ್ಜಾ ಮತ್ತು ಚೇತನ್ ಕುಮಾರ್ ಅಭಿನಯದ ಈ ಸಿನಿಮಾ ಲಾಕ್ ಡೌನ್ ಬಳಿಕ ಮೊದಲ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಗಾಂಧಿನಗರದ ನರ್ತಕಿ ಚಿತ್ರಮಂದಿರ ಪ್ರಮುಖ ಚಿತ್ರಮಂದಿರವಾಗಿ 'ರಣಂ' ಸಿನಿಮಾ ಸ್ವಾಗತಕ್ಕೆ ಸಜ್ಜಾಗಿದೆ.
ಟಾಲಿವುಡ್ ನಲ್ಲಿ ಅಬ್ಬರಿಸಲಿದ್ದಾರೆ 'ಆ ದಿನಗಳು' ಚೇತನ್
'ರಣಂ' ಚಿತ್ರದ ಪ್ರಮುಖ ಪಾತ್ರದಲ್ಲಿ ನಟ ಚಿರಂಜೀವಿ ಸರ್ಜಾ ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್ ಪಾತ್ರಕ್ಕೆ ಬಣ್ಣ ಹಚ್ಚಿರುವ ಚಿರು ಮತ್ತೆ ಅಭಿಮಾನಿಗಳನ್ನು ರಂಜಿಸಲು ಬರ್ತಿದ್ದಾರೆ.
ಇನ್ನೂ ಚಿತ್ರದ ಪ್ರಮುಖ ಪಾತ್ರದಲ್ಲಿ ನಟ ಚೇತನ್ ಕಾಣಿಸಿಕೊಂಡಿದ್ದಾರೆ. ವಿಶೇಷ ಅಂದ್ರೆ 'ರಣಂ' ಸಿನಿಮಾ ನಟ ಚೇತನ್ ಬದುಕಿಗೆ ತುಂಬ ಹತ್ತಿರವಾದ ಸಿನಿಮಾವಂತೆ. ಚೇತನ್ ನೈಜ ಬದುಕಿನ ಹಾಗೆ ಸಿನಿಮಾದಲ್ಲೂ ಸಾಮಾಜಿಕ ಹೋರಾಟ, ರೈತಪರ ಕಾಳಜಿ ಇರುವಂತಹ ನಾಯಕನ ಪಾತ್ರ ಇದಾಗಿದೆಯಂತೆ. ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡುವ ಚೇತನ್ ಈ ಬಾರಿ ಕೂಡ ಒಂದು ತೂಕದ ಪಾತ್ರದ ಮೂಲಕ ಬರ್ತಿದ್ದಾರೆ.
ಚಿತ್ರದಲ್ಲಿ ಚೇತನ್ ಗೆ ನಾಯಕಿಯಾಗಿ ತಮಿಳು ನಟಿ ವರಲಕ್ಷ್ಮಿ ಶರತ್ ಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ವರಲಕ್ಷ್ಮಿ ಕೂಡ ಖಡಕ್ ಲುಕ್ ನಲ್ಲಿ ಮಿಂಚಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ್ ಜೊತೆ 'ಮಾಣಿಕ್ಯ' ಚಿತ್ರದಲ್ಲಿ ಅಭಿನಯಿಸಿದ್ದ ವರಲಕ್ಷ್ಮಿ ನಂತರ ಅರ್ಜುನ್ ಸರ್ಜಾ ಅಭಿನಯದ 'ವಿಸ್ಮಯ' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ 'ರಣಂ' ಮೂಲಕ ಮತ್ತೆ ಕನ್ನಡ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ.