Don't Miss!
- News ರಾಜ್ಯದಲ್ಲಿ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕನಿಗೆ ₹1 ಲಕ್ಷ ಪರಿಹಾರ-ಯಾವ ಜಿಲ್ಲೆಯಲ್ಲಿ?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ 'ಆಯುಷ್ಮಾನ್ ಭವ' ಜೊತೆ 'ರಂಗನಾಯಕಿ' ಪ್ರವೇಶ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಆಯುಷ್ಮಾನ್ ಭವ ಸಿನಿಮಾ ನವೆಂಬರ್ 1ಕ್ಕೆ ತೆರೆಗೆ ಬರುತ್ತಿದೆ. ಪಿ ವಾಸು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಶಿವಣ್ಣ, ರಚಿತಾ ರಾಮ್, ಅನಂತ್ ನಾಗ್ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.
ಆಯುಷ್ಮಾನ್ ಭವ ಸಿನಿಮಾ ಜೊತೆ ಬೇರೆ ಯಾವುದಾದರೂ ಸಿನಿಮಾ ಬರುತ್ತಾ ಎಂದು ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸರ್ಪ್ರೈಸ್ ಇಲ್ಲಿದೆ.
ಹೌದು, ಆಯುಷ್ಮಾನ್ ಭವ ಸಿನಿಮಾ ಜೊತೆ ರಂಗನಾಯಕಿ ಪ್ರವೇಶವಾಗುತ್ತಿದೆ. ಅಧಿತಿ ಪ್ರಭುದೇವ, ಶ್ರೀನಿ, ತ್ರಿವಿಕ್ರಮ್ ನಟಿಸಿರುವ ಈ ಚಿತ್ರವನ್ನ ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
ರಂಗನಾಯಕಿ ಮಹಿಳೆ ಪ್ರಧಾನ ಕಥೆಯಾಗಿದ್ದು, ಅದ್ಭುತವಾಗಿ ಮೂಡಿಬಂದಿರಬಹುದು ಎಂಬ ಭರವಸೆ ಮೂಡಿಸಿದೆ ಟ್ರೈಲರ್. ಎಸ್ ವಿ ನಾರಾಯಣ್ ಅವರು ಈ ಚಿತ್ರ ನಿರ್ಮಿಸಿದ್ದು, ನವೀನ್ ಕೃಷ್ಣ ಸಂಭಾಷಣೆ ರಚಿಸಿದ್ದಾರೆ.
ನವೆಂಬರ್ 1 ರಂದು ಸರ್ಕಾರಿ ರಜೆ ಇದೆ, ಯಾವುದಾದರೂ ಸಿನಿಮಾಗೆ ಹೋಗೋಣ ಎಂದು ಪ್ಲಾನ್ ಮಾಡಿದ್ರೆ, ಈ ಎರಡು ಕನ್ನಡ ಸಿನಿಮಾಗಳು ನಿಮ್ಮನ್ನು ರಂಜಿಸಲು ಸಿದ್ಧವಾಗಿದೆ. ಬಹುಶಃ ಮುಂದಿನ ದಿನದಲ್ಲಿ ಮತ್ಯಾವುದಾದರು ಸಿನಿಮಾ ಈ ಎರಡು ಚಿತ್ರಗಳ ಜೊತೆ ಸೇರಬಹುದು.