Don't Miss!
- News ಬಿಜೆಪಿಗೆ ಮತ್ತೊಂದು ಆಘಾತ, ಮತ್ತೋರ್ವ ವಿಧಾನ ಪರಿಷತ್ ಸದಸ್ಯ ರಾಜೀನಾಮೆ: ಮಾಜಿ ಸಿಎಂ ಏನಂದ್ರು?
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ 'ಆಯುಷ್ಮಾನ್ ಭವ' ಜೊತೆ 'ರಂಗನಾಯಕಿ' ಪ್ರವೇಶ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಆಯುಷ್ಮಾನ್ ಭವ ಸಿನಿಮಾ ನವೆಂಬರ್ 1ಕ್ಕೆ ತೆರೆಗೆ ಬರುತ್ತಿದೆ. ಪಿ ವಾಸು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಶಿವಣ್ಣ, ರಚಿತಾ ರಾಮ್, ಅನಂತ್ ನಾಗ್ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.
ಆಯುಷ್ಮಾನ್ ಭವ ಸಿನಿಮಾ ಜೊತೆ ಬೇರೆ ಯಾವುದಾದರೂ ಸಿನಿಮಾ ಬರುತ್ತಾ ಎಂದು ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸರ್ಪ್ರೈಸ್ ಇಲ್ಲಿದೆ.
ಹೌದು, ಆಯುಷ್ಮಾನ್ ಭವ ಸಿನಿಮಾ ಜೊತೆ ರಂಗನಾಯಕಿ ಪ್ರವೇಶವಾಗುತ್ತಿದೆ. ಅಧಿತಿ ಪ್ರಭುದೇವ, ಶ್ರೀನಿ, ತ್ರಿವಿಕ್ರಮ್ ನಟಿಸಿರುವ ಈ ಚಿತ್ರವನ್ನ ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
ರಂಗನಾಯಕಿ ಮಹಿಳೆ ಪ್ರಧಾನ ಕಥೆಯಾಗಿದ್ದು, ಅದ್ಭುತವಾಗಿ ಮೂಡಿಬಂದಿರಬಹುದು ಎಂಬ ಭರವಸೆ ಮೂಡಿಸಿದೆ ಟ್ರೈಲರ್. ಎಸ್ ವಿ ನಾರಾಯಣ್ ಅವರು ಈ ಚಿತ್ರ ನಿರ್ಮಿಸಿದ್ದು, ನವೀನ್ ಕೃಷ್ಣ ಸಂಭಾಷಣೆ ರಚಿಸಿದ್ದಾರೆ.
ನವೆಂಬರ್ 1 ರಂದು ಸರ್ಕಾರಿ ರಜೆ ಇದೆ, ಯಾವುದಾದರೂ ಸಿನಿಮಾಗೆ ಹೋಗೋಣ ಎಂದು ಪ್ಲಾನ್ ಮಾಡಿದ್ರೆ, ಈ ಎರಡು ಕನ್ನಡ ಸಿನಿಮಾಗಳು ನಿಮ್ಮನ್ನು ರಂಜಿಸಲು ಸಿದ್ಧವಾಗಿದೆ. ಬಹುಶಃ ಮುಂದಿನ ದಿನದಲ್ಲಿ ಮತ್ಯಾವುದಾದರು ಸಿನಿಮಾ ಈ ಎರಡು ಚಿತ್ರಗಳ ಜೊತೆ ಸೇರಬಹುದು.