Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಂದು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಂಗಾಯಣ ರಘು
ಕನ್ನಡದ ಬಹು ಬೇಡಿಕೆಯ ಹಾಸ್ಯ ನಟ ರಂಗಾಯಣ ರಘು ಈಗ ಮತ್ತೊಂದು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತುಳು ಚಿತ್ರರಂಗದಲ್ಲಿ ರಂಗಾಯಣ ರಘು ಖಾತೆ ತೆರೆದಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸೂಪರ್ ಹಿಟ್ ಸಿನಿಮಾವನ್ನು ನೀಡಿರುವ ಈ ಕಲಾವಿದನಿಗೆ ಕೋಸ್ಟಲ್ ವುಡ್ ಕೈ ಬೀಸಿ ಕರೆದಿದೆ.
'ಮೈ ನೇಮ್ ಇಸ್ ಅನ್ನಪ್ಪ' ಎನ್ನುವ ಹೊಸ ತುಳು ಸಿನಿಮಾದಲ್ಲಿ ರಂಗಾಯಣ ರಘು ನಟಿಸುತ್ತಿದ್ದಾರೆ. ಚಿತ್ರದಲ್ಲಿ ಇವರ ಪಾತ್ರ ಬಹು ಮುಖ್ಯವಾಗಿದ್ದು, ಸಂಗೀತ ಶಿಕ್ಷಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಪಾತ್ರ ರಂಗಾಯಣ ರಘು ಅವರಿಗೆ ತುಂಬ ಚೆನ್ನಾಗಿ ಸೂಟ್ ಆಗಲಿದೆಯಂತೆ.
ರಾಜಕೀಯಕ್ಕೆ ಎಂಟ್ರಿಕೊಡುತ್ತಿರುವ 'ರಂಗಾಯಣ ರಘು' ಎಕ್ಸ್ಕ್ಲೂಸಿವ್ ಸಂದರ್ಶನ
ಮಯೂರ್ ಎಂಬುವವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ 'ಪರಮಾತ್ಮ' ಸಿನಿಮಾದಲ್ಲಿ ರಂಗಾಯಣ ರಘು ನಟನೆ ನೋಡಿ ಇಷ್ಟ ಪಟ್ಟಿದ್ದ ಮಯೂರ್ ತಮ್ಮ ಈ ಚಿತ್ರಕ್ಕಾಗಿ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಅಂದಹಾಗೆ, ಸಂಗೀತ ಶಿಕ್ಷಕನ ಪಾತ್ರ ತುಂಬ ಘನತೆ ಹೊಂದಿದ್ದು, ಖುಷಿಯಿಂದ ರಂಗಾಯಣ ರಘು ಆ ಪಾತ್ರವನ್ನು ಒಪ್ಪಿಕೊಂಡಿದ್ದಾರಂತೆ. ಈಗಾಗಲೇ ರಂಗಾಯಣ ರಘು ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಕನ್ನಡದಲ್ಲಿ 'ಅಯೋಗ್ಯ' ಹಾಗೂ 'ಆದಿ ಪುರಾಣ' ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.