Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ 'ರನ್ನ' ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗಷ್ಟೆ ನಿಧಿನಹೊಂದಿದ ಖ್ಯಾತ ನಿರ್ಮಾಪಕ ಕೋಟಿ ರಾಮು ಅವರನ್ನು ಕಳೆದುಕೊಂಡಿರುವ ದುಃಖ ಮಾಸುವ ಮೊದಲೇ ಮತ್ತೋರ್ವ ನಿರ್ಮಾಪಕನ ಸಾವು ಚಿತ್ರರಂಗಕ್ಕೆ ಆಘಾತತಂದಿದೆ.
Recommended Video
ನಿಮಿಶಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ ನ ಅನ್ನದಾತನನ್ನು ಕೊರೊನಾ ಬಲಿ ಪಡೆದಿದೆ.
ಪುನೀತ್, ಶ್ರೀಮುರಳಿ ಸಿನಿಮಾಗಳ ಮೇಕಪ್ ಮ್ಯಾನ್ ಸೀನಣ್ಣ ನಿಧನ
ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಮಣಿಪಾಲ್ ಸೆಂಟರ್ ಗೆ ದಾಖಲಾಗಿದ್ದರು. ಬಳಿಕ ಕೋವಿಡ್ ನಿಂದ ಗುಣಮುಖರಾಗಿದ್ದಾದರೂ ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಇಂದು (ಏಪ್ರಿಲ್ 29) ಕೊನೆಯುಸಿರೆಳೆದಿದ್ದಾರೆ.
ನಿರ್ಮಾಪಕ ಚಂದ್ರಶೇಖರ್ ಇತ್ತೀಚಿಗಷ್ಟೆ ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನದ ಉಪೇಂದ್ರ ನಟನೆಯ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. ಆದರೆ ವಿಧಿಯಾಟ ಬೇರೆನೇ ಆಗಿತ್ತು. ಸಿನಿಮಾ ಸೆಟ್ಟೇರುವ ಮೊದಲೆ ಇಹಲೋಕ ತ್ಯಜಿಸಿದ್ದಾರೆ.
ಕೊರೊನಾ ಎರಡನೇ ಅಲೆಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆ, ಬೆಸ್, ಆಕ್ಸಿಜನ್ ಇಲ್ಲದೆ ಜನ ಒದ್ದಾಡುತ್ತಿದ್ದಾರೆ. ಚಿತ್ರರಂಗದ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇತ್ತೀಚಿಗಷ್ಟೆ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಶ್ರೀರಾಮು ಕಣಗಾಲ್ ಅವರು ಕೂಡ ಕೊರೊನಾಗೆ ಬಲಿಯಾಗಿದ್ದಾರೆ.