ಅಗಲಿದ ನಾಯಕನಿಗೆ ನಮನ ಸಲ್ಲಿಸಿದ ಸುಮಲತಾ, ರಶ್ಮಿಕಾ
ಟಾಲಿವುಡ್ ನಟ ಹರಿಕೃಷ್ಣ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಹರಿಕೃಷ್ಣ ಅವರು ಮೃತರಾಗಿದ್ದು, ಎಲ್ಲರಿಗೂ ಇದೊಂದು ಶಾಕ್ ಸುದ್ದಿಯಾಗಿದೆ.
ನಟ ಹರಿಕೃಷ್ಣ ಅವರ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹಾಗೂ ಸುಮಲತಾ ಅಂಬರೀಶ್ ಟ್ವೀಟ್ ಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಗಲಿದ ನಟನನ್ನು ಸುಮಲತಾ ಅಂಬರೀಶ್ ನೆನಪು ಮಾಡಿಕೊಂಡಿದ್ದಾರೆ.

''ನಂದಮೂರಿ ಹರಿಕೃಷ್ಣ ಅವರ ಅಗಲಿಕೆಯ ಸುದ್ದಿ ಕೇಳಿ ತುಂಬ ದುಖಃ ಆಗುತ್ತಿದೆ. ದೇವರು ಅವರ ಕುಟುಂಬಕ್ಕೆ ಈ ದುಖಃವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ.'' ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ.
ಅಂದಹಾಗೆ, ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು ಇಂದು ಬೆಳಗಿನ ಜಾವ 4.30ರ ಸಮಯದಲ್ಲಿ ಹರಿಕೃಷ್ಣ ಅವರು ಮನೆಯಿಂದ ಹೊರಟಿದ್ದರು. ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
More from Filmibeat
English summary
Actress Rashmika Mandanna and Sumalatha Ambareesh tweets about Nandamuri Harikrishna death. Popular tollywood actor and politician NT Ramarao's son Nandamuri Harikrishna died in an accident on Wednesday near Nalginda, Telangana.
rashmika mandanna sumalatha ambareesh ntr accident telugu cinema tollywood death ರಶ್ಮಿಕಾ ಮಂದಣ್ಣ ಸುಮಲತಾ ಅಂಬರೀಶ್ ಎನ್ಟಿಆರ್ ಅಪಘಾತ ತೆಲುಗು ಸಿನಿಮಾ ನಿಧನ ಟಾಲಿವುಡ್


Click it and Unblock the Notifications











