Don't Miss!
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಶಿಕುಮಾರ್ ಮಗನ ಸಾಹಸಕ್ಕೆ ರಶ್ಮಿಕಾ ಮಂದಣ್ಣ ಶುಭಾಶಯ
ಸುಪ್ರೀಂ ಹೀರೋ ಆಗಿ ಮಿಂಚಿದ್ದ ಶಶಿಕುಮಾರ್, ಕನ್ನಡ ಚಿತ್ರರಂಗದಿಂದ ಕೆಲಕಾಲ ದೂರವಾಗಿದ್ದರು. ಆದರೆ ಮರಳಿ ಬಂದಿರುವ ಅವರು, ಈಗ ಪುತ್ರನನ್ನೂ ಕರೆತಂದಿದ್ದಾರೆ.
ಹೌದು, ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ನಟನೆಯ ಹೊಸ ಸಿನಿಮಾ ರೆಡಿಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಹೆಸರು 'ಸೀತಾಯಣ'.
ನಟ ಸೂರ್ಯಾ ಮುಂದಿನ ಸಿನಿಮಾಕ್ಕೆ ಕನ್ನಡತಿ ನಾಯಕಿ?
ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ನವೆಂಬರ್ 25 ರಂದು ನಟಿ ರಶ್ಮಿಕಾ ಮಂದಣ್ಣ ಅವರು ಸೀತಾಯಣ ಸಿನಿಮಾದ ಸುಂದರವಾದ ಹಾಡನ್ನು ಬಿಡುಗಡೆ ಮಾಡಿದ್ದಾರೆ.
ಕನ್ನಡದಲ್ಲಿ ಕವಿರಾಜ್ ಬರೆದಿರುವ 'ಸಂಜೆ ಗಗನ' ಸೇರಿದಂತೆ ತೆಲುಗು-ತಮಿಳಿನ ಹಾಡುಗಳನ್ನು ಒಟ್ಟಿಗೆ ತಮ್ಮ ಟ್ವಿಟ್ಟರ್ ಖಾತೆಯಿಂದ ರಶ್ಮಿಕಾ ಮಂದಣ್ಣ ಬಿಡುಗಡೆ ಮಾಡಿದ್ದಾರೆ.
'ಈ ಹಾಡು ನನಗೆ ಬಹಳ ಇಷ್ಟವಾಯಿತು' ಎಂದಿರುವ ರಶ್ಮಿಕಾ, ಅಕ್ಷಿತ್ ಶಶಿಕುಮಾರ್ ಸೇರಿದಂತೆ ಸೀತಾಯಣ ಸಿನಿಮಾದ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.
ಚಿತ್ರರಂಗಕ್ಕೆ ಬರ್ತಿರೋ ಶಶಿ ಕುಮಾರ್ ಮಗನಿಗೆ ಸಿಕ್ಕಿದೆ ದರ್ಶನ್ ಬೆಂಬಲ
Recommended Video
ಶಶಿಕುಮಾರ್ ಮಗನ ಸಿನಿಮಾಕ್ಕೆ ಶಿವರಾಜ್ ಕುಮಾರ್ ಸಹ ಶುಭಾಶಯ ತಿಳಿಸಿದ್ದರು. ತೆಲುಗಿನ ನಟ ರವಿತೇಜ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ಕೆಲವೇ ದಿನಗಳಲ್ಲಿ ಸಿನಿಮಾ ಮೂರೂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.