Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತನ್ನನ್ನು ಹುಡುಕಿ ವಿರಾಜಪೇಟೆಗೆ ಬಂದಿದ್ದ ಅಭಿಮಾನಿಯ ಬಗ್ಗೆ ರಶ್ಮಿಕಾ ಹೇಳಿದ್ದೇನು?
ನಟಿ ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗಹೊಂದಿರುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಅತಿ ಕಡಿಮೆ ಅವಧಿಯಲ್ಲೇ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಅವರ ಅಪ್ಪಟ ಅಭಿಮಾನಿ ಆಕಾಶ್ ತ್ರಿಪಾಠಿ ಎನ್ನುವವರು ನೆಚ್ಚಿನ ನಟಿಯನ್ನು ನೋಡಿ, ಮಾತನಾಡಿಸಲು ಕೊಡಗು ಜಿಲ್ಲೆಯ ವಿರಾಜಪೇಟೆಗೆ ಬಂದಿದ್ದರು.
Recommended Video
ಮೂಲತಹ ವಿರಾಜಪೇಟೆಯವರಾದ ರಶ್ಮಿಕಾ ಅಲ್ಲಿಯೇ ಇರುತ್ತಾರೆಂದು ತಿಳಿದು, ಹೈದರಾಬಾದ್ ನಿಂದ ಮೈಸೂರಿಗೆ ರೈಲಿನಲ್ಲಿ ಬಂದು ಅಲ್ಲಿಂದ ಗೂಡ್ಸ್ ಆಟೋದಲ್ಲಿ ವಿರಾಜಪೇಟೆಗೆ ಭೇಟಿ ನೀಡಿದ್ದರು. ಬಳಿಕ ರಶ್ಮಿಕಾ ಮನೆ ಹುಡುಕಲು ದಿನಪೂರ್ತಿ ಅಲೆದಾಡಿದ್ದರು.
ರಶ್ಮಿಕಾ ಮಂದಣ್ಣ ಅಭಿಮಾನಿಯೊಬ್ಬ ಮಾಡಿದ್ದಾನೆ ಹುಚ್ಚು ಸಾಹಸ
ಮನೆ ಹುಡುಕುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಅತನನ್ನು ವಿಚಾರಿಸಿದ ಬಳಿಕ ಹೈದರಾಬಾದ್ ನಿಂದ ರಶ್ಮಿಕಾರನ್ನು ನೋಡಲು ಬಂದಿರುವುದಾಗಿ ತಿಳಿದುಬಂದಿದೆ. ಪೊಲೀಸರು ಆತನಿಗೆ ಬೈದು ಬುದ್ಧಿವಾದ ಹೇಳಿ ಹೈದರಾಬಾದ್ ಗೆ ಕಳುಹಿಸಿದ್ದಾರೆ. ಅಂದಹಾಗೆ ರಶ್ಮಿಕಾ ಸದ್ಯ ಮುಂಬೈನಲ್ಲಿ ವಾಸ್ತವ್ಯ ಹೂಡಿರುವುದರದಿಂದ ನೆಚ್ಚಿನ ನಟಿಯನ್ನು ಭೇಟಿಯಾಗಲು ಆಕಾಶ್ ಗೆ ಸಾಧ್ಯವಾಗಿಲ್ಲ.
ಈ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಈಗ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಶ್ಮಿಕಾ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂಬ ನೋವು ನನ್ನಲ್ಲಿ ಇದೆ. ಆದರೆ ಇಂತ ಸಾಹಸ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
"ನನ್ನ ಗಮನಕ್ಕೆ ಈಗ ಬಂತು. ನಿಮ್ಮಲ್ಲಿ ಒಬ್ಬರು ತುಂಬಾ ದೂರ ಪ್ರಯಾಣ ಮಾಡಿ ನನ್ನನ್ನು ನೋಡಲು ಮನೆಗೆ ಹೋಗಿದ್ದಾರೆ. ದಯವಿಟ್ಟು ಹೀಗೆ ಮಾಡಬೇಡಿ. ನಿಮ್ಮನ್ನು ಭೇಟಿಯಾಗಿಲ್ಲ ಎನ್ನುವ ನೋವು ನನಗಿದೆ. ಒಂದು ದಿನ ಖಂಡಿತ ನಿಮ್ಮನ್ನು ಭೇಟಿಯಾಗುತ್ತೇನೆ. ಆದರೀಗ ಪ್ರೀತಿ ತೋರಿಸಿ. ನಾನು ತುಂಬಾ ಪಡುತ್ತೇನೆ" ಎಂದು ಹೇಳಿದ್ದಾರೆ.
ರಶ್ಮಿಕಾ ಸದ್ಯ ಅಮಿತಾಬ್ ಬಚ್ಚನ್ ಗುಡ್ ಬೈ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ಮಿಷನ್ ಮಜ್ನು ಕೂಡ ರಶ್ಮಿಕಾ ಕೈಯಲ್ಲಿದೆ. ಬಾಲಿವುಡ್ ನ ಎರಡು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದ್ದು ರಶ್ಮಿಕಾ ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ.