Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗಕ್ಕೆ ಬರಲು ಕಾರಣವಾದ ಘಟನೆ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ
ದಕ್ಷಿಣ ಭಾರತ ಸಿನಿ ಉದ್ಯಮದ ಖ್ಯಾತ ನಟಿಯರಲ್ಲೊಬ್ಬರು ರಶ್ಮಿಕಾ ಮಂದಣ್ಣ. ತೆಲುಗಿನಲ್ಲಂತೂ ಬಹು ಬೇಡಿಕೆಯ ನಟಿ ಆಗಿದ್ದಾರೆ ಕನ್ನಡತಿ ರಶ್ಮಿಕಾ.
Recommended Video
ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪರಿಚಯವಾದ ನಟಿ ರಶ್ಮಿಕಾ ಏರುತ್ತಿರುವ ಎತ್ತರ ಸಾಮಾನ್ಯವಾದುದಲ್ಲ. ತೆಲುಗಿನ ಸ್ಟಾರ್ ನಟರ ಸಿನಿಮಾಗಳಿಗೆ ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಮೊದಲ ಆಯ್ಕೆ!
'ಪುಷ್ಪ' ಚಿತ್ರಕ್ಕೆ ರಶ್ಮಿಕಾ ಸಂಭಾವನೆ ಎಷ್ಟು? ಕೊರೊನಾ ಕಾಟದಿಂದ ತಲೆಕೆಳಗಾದ ಕಿರಿಕ್ ನಟಿಯ ಪ್ಲಾನ್
ಆದರೆ ರಶ್ಮಿಕಾ ಮಂದಣ್ಣ ಸಿನಿರಂಗಕ್ಕೆ ಬಂದಿದ್ದು ಹೇಗೆ? ರಶ್ಮಿಕಾ ಮಂದಣ್ಣ ಸಿನಿಮಾ ರಂಗಕ್ಕೆ ಬರಲು ಕಾರಣವಾದ ಘಟನೆ ಯಾವುದು?ಈ ಬಗ್ಗೆ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಮಿಸ್ಸಿಂಗ್ ಯೂ..' ಎಂದ ವಿಜಯ್ ದೇವರಕೊಂಡಗೆ ರಶ್ಮಿಕಾ ಪ್ರತಿಕ್ರಿಯೆ ಹೀಗಿದೆ
ರಶ್ಮಿಕಾ ಮಂದಣ್ಣ ಇಂದು ಯಾವ ಸ್ಥಾನದಲ್ಲಿದ್ದಾರೋ ಆ ಸ್ಥಾನಕ್ಕೆ ಬರಲು ಬಹುಮುಖ್ಯ ಕಾರಣ ಆ ಒಂದು ಘಟನೆಯಂತೆ. ಅಂಥಹಾ ಅಪರೂಪದ ಘಟನೆಯ ಬಗ್ಗೆ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ, ಅಕ್ಷಯ್ ಕುಮಾರ್ ಜೊತೆಗಿರುವ ಚಿತ್ರ
ರಶ್ಮಿಕಾ ಮಂದಣ್ಣ, ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜೊತೆ ತೆಗೆಸಿಕೊಂಡಿರುವ ಚಿತ್ರವೊಂದರ ಬಗ್ಗೆ ಅಭಿಮಾನಿಯೊಬ್ಬ ರಶ್ಮಿಕಾ ಮಂದಣ್ಣ ಅವರಿಗೆ ಪ್ರಶ್ನೆ ಕೇಳಿದ.
'ಚಿತ್ರರಂಗಕ್ಕೆ ಪ್ರವೇಶ ಮಾಡಲು ಕಾರಣವಾದ ಘಟನೆ ಅದು'
ಇದಕ್ಕೆ ಉತ್ತರಿಸಿದ ರಶ್ಮಿಕಾ ಮಂದಣ್ಣ, ನಾನು ಇಂದು ಏನಾಗಿದ್ದೇನೋ ಅದಕ್ಕೆ ಮೂಲ ಕಾರಣ ಆ ದಿನದ ಘಟನೆ ಎನ್ನುವ ಮೂಲಕ ಚಿತ್ರದ ಹಿಂದಿನ ಕತೆಯನ್ನು ಚುಟುಕಾಗಿ ಹೇಳಿದ್ದಾರೆ.
ಜನ ಮೆಚ್ಚುವ ಕೆಲಸ ಮಾಡಿದ ನಟಿ ರಶ್ಮಿಕಾ ಮಂದಣ್ಣ
ಫ್ರೆಶ್ ಪೇಸ್ ಇಂಡಿಯಾ ವಿನ್ನರ್ ರಶ್ಮಿಕಾ ಮಂದಣ್ಣ
ಅಕ್ಷಯ್ ಕುಮಾರ್ ಅವರೊಟ್ಟಿಗೆ ತೆಗೆಸಿಕೊಂಡಿರುವ ಆ ಚಿತ್ರ, 2014 ರ 'ಫ್ರೆಶ್ ಫೇಸ್ ಇಂಡಿಯಾ' 2014 ಸೌಂದರ್ಯ ಸ್ಪರ್ಧೆಯದ್ದು. ಸ್ಪರ್ಧೆಯಲ್ಲಿ ಗೆದ್ದಿದ್ದ ರಶ್ಮಿಕಾ ಗೆ ಅಕ್ಷಯ್ ಕುಮಾರ್ ಮತ್ತು ರಾಣಾ ದಗ್ಗುಬಾಟಿ ಪ್ರಶಸ್ತಿ ನೀಡಿದ್ದರು.
ಕಿರಿಕ್ ಪಾರ್ಟಿ ಸಿನಿಮಾಕ್ಕೆ ಆಯ್ಕೆ ಆಗಲು ಮೂಲ ಕಾರಣ ಅದು
ಸ್ಪರ್ಧೆಯಲ್ಲಿ ಗಮನ ಸೆಳೆದಿದ್ದ ರಶ್ಮಿಕಾ ರನ್ನು ನಂತರ ಕಿರಿಕ್ ಪಾರ್ಟಿ ಸಿನಿಮಾಕ್ಕೆ ಆಯ್ಕೆ ಮಾಡಲಾಯಿತು. ಸಿನಿಮಾ ಬಿಡುಗಡೆ ಆದ ಬಳಿಕ ಆಗಿದ್ದು ಇತಿಹಾಸ. ಇಂದು ರಶ್ಮಿಕಾ ಮಂದಣ್ಣ ತೆಲುಗು, ತಮಿಳು, ಕನ್ನಡದಲ್ಲಿ ಬೇಡಿಕೆಯ ನಟಿ.