Don't Miss!
- News
Bengaluru Airport: ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಯುವತಿಯಿಂದ ಬೆದರಿಕೆ
- Technology
ಟೆಲಿಗ್ರಾಮ್ನಲ್ಲಿ ವಾಟ್ಸಾಪ್ ಅನ್ನೇ ಮೀರಿಸುವ ಫೀಚರ್ಸ್!; ಬಳಕೆದಾರರಿಗೆ ಸಾಕಷ್ಟು ಅನುಕೂಲ
- Finance
ಅದಾನಿ ಡಾಲರ್ ಬಾಂಡ್ ವಿರುದ್ಧ ಸಾಲ ನೀಡಲು ಸ್ಟಾಡರ್ಡ್ ಚಾರ್ಟೆಡ್ ನಕಾರ: ವರದಿ
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತವನ್ನು ಮಣಿಸಲು ಆಸಿಸ್ ತಂಡಕ್ಕೆ ಮಿಚೆಲ್ ಜಾನ್ಸನ್ ಸಲಹೆ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಕಿಚ್ಚ ಸುದೀಪ್ ಗೆ ನಾಚಿಕೆ ಜಾಸ್ತಿ': ಹಿರಿಯ ಪತ್ರಕರ್ತ ರವಿ ಬೆಳಗೆರೆ
Recommended Video
ಅಭಿನಯ ಚಕ್ರವರ್ತಿ ಕಿಚ್ಟ ಸುದೀಪ್ ಮತ್ತು ರವಿ ಬೆಳಗೆರೆ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ಕಾರ್ಯಕ್ರಮದ ನಂತರ ಸುದೀಪ್ ಮತ್ತು ರವಿ ಬೆಳಗೆರೆ ಇಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಈ ಸಮಯದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕಿಚ್ಚ ಸುದೀಪ್ ಕಾಲೆಳೆದು ತಮಾಷೆ ಮಾಡಿದ್ದಾರೆ.
ಇತ್ತೀಚಿಗೆ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಬರೆದ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ರವಿಬೆಳಗೆರೆ, ಕಿಚ್ಚ ಸುದೀಪ್ ಮತ್ತು ನಟಿ ತಾರಾ ಗೆಸ್ಟ್ ಆಗಿ ಆಮಿಸಿದ್ದರು. ಈ ಸಮಯದಲ್ಲಿ ರವಿ ಬೆಳಗೆರೆ ಸುದೀಪ್ ಬಗ್ಗೆ ಮಾತನಾಡುತ್ತ "ಕಿಚ್ಚ ಸುದೀಪ್ ಗೆ ನಾಚಿಕೆ ಜಾಸ್ತಿ. ಅದರಲ್ಲೂ ಗಂಡಸರ ಮದ್ಯೆ ಇದರೆ ಜಾಸ್ತಿನೇ ನಾಚಿಕೊಳ್ಳುತ್ತಾರೆ" ಎಂದು ಹೇಳಿದ್ದಾರೆ.
ನಟಿ
ಶ್ರುತಿ
ಹರಿಹರನ್
ಹೊಗಳಿದ
ಕಿಚ್ಚ
ಸುದೀಪ್
ರವಿ ಬೆಳಗೆರೆ ಮಾತಿಗೆ ಪ್ರತಿಯಾಗಿ ಸುದೀಪ್ "ಹುಡುಗಿಯರ ಹತ್ತಿರ ನಾಚಿಕೆ ಮಾಡಿಕೊಂಡರೆ ಆಗೋ ಕೆಲಸ ಆಗುವುದಿಲ್ಲ. ಇದನ್ನ ರವಿ ಬೆಳಗೆರೆ ಅವರೆ ಚಿಕ್ಕ ವಯಸ್ಸಿನಲ್ಲಿ ಹೇಳಿಕೊಟ್ಟಿದ್ದಾರೆ" ಎಂದು ಹೇಳಿ ತಮಾಷೆ ಮಾಡಿದ್ರು. ನಂತರ ಪುಸ್ತಕದ ಬಗ್ಗೆ ಮಾತನಾಡಿದ ಸುದೀಪ್ ಬರವಣಿಗೆ ಒಂದು ಕಲೆಯಾದರೆ ಓದುವುದು ಕೂಡ ಕಲೆ ಎಂದು ಹೇಳಿದರು.
ಸುದೀಪ್ ಸದ್ಯ ಕೋಟಿಗೊಬ್ಬ-3 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದಾರೆ. ಮುಂದಿನ ತಿಂಗಳಿಂದ ಅನೂಪ್ ಭಂಡಾರಿ ನಿರ್ದೇಶನದ 'ಫ್ಯಾಂಟಮ್' ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಸಲ್ಮಾನ್ ಖಾನ್ ಎದುರು ವಿಲನ್ ಆಗಿ ಅಬ್ಬರಿಸಿರುವ ದಬಾಂಗ್-3 ಸಿನಿಮಾ ಮುಂದಿನ ತಿಂಗಳು 20ಕ್ಕೆ ತೆರೆಗೆ ಬರುತ್ತಿದೆ.