Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಿಚ್ಚ ಸುದೀಪ್ ಗೆ ನಾಚಿಕೆ ಜಾಸ್ತಿ': ಹಿರಿಯ ಪತ್ರಕರ್ತ ರವಿ ಬೆಳಗೆರೆ
Recommended Video
ಅಭಿನಯ ಚಕ್ರವರ್ತಿ ಕಿಚ್ಟ ಸುದೀಪ್ ಮತ್ತು ರವಿ ಬೆಳಗೆರೆ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ಕಾರ್ಯಕ್ರಮದ ನಂತರ ಸುದೀಪ್ ಮತ್ತು ರವಿ ಬೆಳಗೆರೆ ಇಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಈ ಸಮಯದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕಿಚ್ಚ ಸುದೀಪ್ ಕಾಲೆಳೆದು ತಮಾಷೆ ಮಾಡಿದ್ದಾರೆ.
ಇತ್ತೀಚಿಗೆ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಬರೆದ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ರವಿಬೆಳಗೆರೆ, ಕಿಚ್ಚ ಸುದೀಪ್ ಮತ್ತು ನಟಿ ತಾರಾ ಗೆಸ್ಟ್ ಆಗಿ ಆಮಿಸಿದ್ದರು. ಈ ಸಮಯದಲ್ಲಿ ರವಿ ಬೆಳಗೆರೆ ಸುದೀಪ್ ಬಗ್ಗೆ ಮಾತನಾಡುತ್ತ "ಕಿಚ್ಚ ಸುದೀಪ್ ಗೆ ನಾಚಿಕೆ ಜಾಸ್ತಿ. ಅದರಲ್ಲೂ ಗಂಡಸರ ಮದ್ಯೆ ಇದರೆ ಜಾಸ್ತಿನೇ ನಾಚಿಕೊಳ್ಳುತ್ತಾರೆ" ಎಂದು ಹೇಳಿದ್ದಾರೆ.
ನಟಿ ಶ್ರುತಿ ಹರಿಹರನ್ ಹೊಗಳಿದ ಕಿಚ್ಚ ಸುದೀಪ್
ರವಿ ಬೆಳಗೆರೆ ಮಾತಿಗೆ ಪ್ರತಿಯಾಗಿ ಸುದೀಪ್ "ಹುಡುಗಿಯರ ಹತ್ತಿರ ನಾಚಿಕೆ ಮಾಡಿಕೊಂಡರೆ ಆಗೋ ಕೆಲಸ ಆಗುವುದಿಲ್ಲ. ಇದನ್ನ ರವಿ ಬೆಳಗೆರೆ ಅವರೆ ಚಿಕ್ಕ ವಯಸ್ಸಿನಲ್ಲಿ ಹೇಳಿಕೊಟ್ಟಿದ್ದಾರೆ" ಎಂದು ಹೇಳಿ ತಮಾಷೆ ಮಾಡಿದ್ರು. ನಂತರ ಪುಸ್ತಕದ ಬಗ್ಗೆ ಮಾತನಾಡಿದ ಸುದೀಪ್ ಬರವಣಿಗೆ ಒಂದು ಕಲೆಯಾದರೆ ಓದುವುದು ಕೂಡ ಕಲೆ ಎಂದು ಹೇಳಿದರು.
ಸುದೀಪ್ ಸದ್ಯ ಕೋಟಿಗೊಬ್ಬ-3 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದಾರೆ. ಮುಂದಿನ ತಿಂಗಳಿಂದ ಅನೂಪ್ ಭಂಡಾರಿ ನಿರ್ದೇಶನದ 'ಫ್ಯಾಂಟಮ್' ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಸಲ್ಮಾನ್ ಖಾನ್ ಎದುರು ವಿಲನ್ ಆಗಿ ಅಬ್ಬರಿಸಿರುವ ದಬಾಂಗ್-3 ಸಿನಿಮಾ ಮುಂದಿನ ತಿಂಗಳು 20ಕ್ಕೆ ತೆರೆಗೆ ಬರುತ್ತಿದೆ.