Don't Miss!
- News ಮಂಡ್ಯ ಅಖಾಡಕ್ಕೆ ದಳಪತಿ ಎಂಟ್ರಿ: ಕಾಂಗ್ರೆಸ್ನಲ್ಲಿರುವ ನೀವು ಏನು?- ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದು ಸುದೀಪ್ ಗೆ ವಿಲನ್ ಆಗಿದ್ದ ಈ ನಟ ಈಗ ದರ್ಶನ್ ಗೆ ವಿಲನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ರಾಬರ್ಟ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಬೆಂಗಳೂರು, ಹೈದರಾಬಾದ್, ವಾರಾಣಸಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿರುವ ಚಿತ್ರತಂಡ ಈಗ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.
ಚಿತ್ರತಂಡದಿಂದ ಈಗ ಮತ್ತೊಂದು ಬಿಗ್ ಬ್ರೇಕಿಂಗ್ ಸುದ್ದಿ ಕೇಳಿ ಬರುತ್ತಿದೆ. ಮೂಲಗಳ ಪ್ರಕಾರ ರಾಬರ್ಟ್ ಚಿತ್ರಕ್ಕೆ ಮತ್ತೋರ್ವ ಖ್ಯಾತ ನಟ ಸೇರ್ಪಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭೋಜಪುರಿಯ ಖ್ಯಾತ ನಟ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಅಬ್ಬರಿಸುತ್ತಿರುವ ರವಿ ಕಿಶನ್ ಈಗ ಚಾಲೆಂಜಿಂಗ್ ಸ್ಟಾರ್ ಎದುರು ತೊಡೆತಟ್ಟಿ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಟ ರವಿ ಕಿಶನ್ ಹಿಂದಿ, ಭೋಜಪುರಿ ಭಾಷೆಯಲ್ಲಿ ಅಭಿನಯಿಸಿರುವ ರವಿ ಕಿಶನ್ ಅಪರೂಪಕ್ಕೊಮ್ಮೆ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾದಲ್ಲೂ ಮಿಂಚಿದ್ದಾರೆ. ಮೊದಲ ಬಾರಿಗೆ ರವಿ ಕಿಶನ್ ಸುದೀಪ್ ಅಭಿನಯದ ಹೆಬ್ಬುಲಿ ಸಿನಿಮಾದಲ್ಲಿ ವಿಲನ್ ಆಗಿ ಬಣ್ಣಹಚ್ಚಿದ್ದಾರೆ.
ಅಂದ್ಹಾಗೆ ರಾಬರ್ಟ್ ಚಿತ್ರದಲ್ಲಿ ಈಗಾಗಲೆ ಖ್ಯಾತ ವಿಲನ್ ಜಗಪತಿ ಬಾಬು ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೀಗ ರವಿ ಕಿಶನ್ ಹೆಸರು ಕೂಡ ಕೇಳಿ ಬರುತ್ತಿದೆ. ಆದ್ರೆ ಇದು ನಿಜಾನಾ ಅಥವಾ ಗಾಳಿ ಸುದ್ದಿಯ ಎನ್ನುವುದನ್ನು ಚಿತ್ರತಂಡ ಕನ್ಫರ್ಮ್ ಮಾಡಬೇಕಿದೆ.
ದರ್ಶನ್ ಸದ್ಯ ಸ್ವಿಡ್ಜರ್ಲ್ಯಾಂಡ್ ನಲ್ಲಿದ್ದಾರೆ. ಒಡೆಯ ಚಿತ್ರದ ಹಾಡಿನ ಚಿತ್ರೀಕರಣಕ್ಕೆಂದು ದರ್ಶನ್ ಮತ್ತು ತಂಡ ಸ್ವಿಡ್ಜರ್ಲ್ಯಾಂಡ್ ನಲ್ಲಿ ಬೀಡು ಬಿಟ್ಟಿದ್ದಾರೆ. ಒಡೆಯ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ರಾಬರ್ಟ್ ಚಿತ್ರೀಕರಣದಲ್ಲಿ ಬ್ಯುಸಿಯಾಗಲಿದ್ದಾರೆ. ರಾಬರ್ಟ್ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ.