Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ವಿಜಯಲಕ್ಷ್ಮಿ ವಿರುದ್ಧ ಪೊಲೀಸ್ ದೂರು ನೀಡಿದ ರವಿಪ್ರಕಾಶ್
ನಟಿ ವಿಜಯಲಕ್ಷ್ಮಿ ಮತ್ತು ಆಕೆಯ ಸೋದರಿ ಉಷಾದೇವಿ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟಿ ವಿಜಯಲಕ್ಷ್ಮಿಗೆ ಆಸ್ಪತ್ರೆ ಖರ್ಚಿಗೆ ಒಂದು ಲಕ್ಷ ಹಣ ಸಹಾಯ ಮಾಡಿದ ನಟ ರವಿಪ್ರಕಾಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿಜಯಲಕ್ಷ್ಮಿ ಅವರಿಂದ ತಮಗಾಗಿರುವ ನೋವು ಮತ್ತು ಅವಮಾನಗಳ ಬಗ್ಗೆ ಪೊಲೀಸರ ಬಳಿ ಹೇಳಿಕೊಂಡಿದ್ದು, ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ನನ್ನಿಂದ ಸಹಾಯ ಪಡೆದು ಸಮಾಜದಲ್ಲಿ ನನಗೆ ಅವಮಾನವಾಗುವ ರೀತಿ ವಿಡಿಯೋಗಳನ್ನ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.
ವಿಜಯಲಕ್ಷ್ಮಿಯ ಕಿರುಕುಳ ಆರೋಪಕ್ಕೆ ಸ್ಪಷ್ಟನೆ ನೀಡಿದ ನಟ
ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ದೂರು ದಾಖಲಿಸಿದ್ದಾರೆ ರವಿಪ್ರಕಾಶ್. ಈಗ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಘನತೆಗೆ ಧಕ್ಕೆತಂದಿರುವ ಆರೋಪ ಮೇಲೆ ದೂರು ದಾಖಲಾಗಿದೆ.
'ಹಣ ನೀಡಿ ಹಿಂಸೆ ನೀಡಿದ್ದಾರೆ' : ನಟನ ಮೇಲೆ ವಿಜಯಲಕ್ಷ್ಮಿ ಆರೋಪ!
ಮತ್ತೊಂದೆಡೆ ತಿಲಕ್ ನಗರದಲ್ಲಿ ನಟಿ ವಿಜಯಲಕ್ಷ್ಮಿ ಅವರು ನಟ ರವಿಪ್ರಕಾಶ್ ಅವರ ಮೇಲೆ ದೂರು ದಾಖಲಾಗಿದೆ. ಅಭಿಮಾನಿ ರೂಪದಲ್ಲಿ ಬಂದ ರವಿಪ್ರಕಾಶ್ ಅವರು ಹಣ ಸಹಾಯ ಮಾಡಿ, ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ವಿಜಯಲಕ್ಷ್ಮಿಗೆ ಒಂದು ಲಕ್ಷ ಹಣಕಾಸು ನೆರವು ನೀಡಿದ ರವಿ ಪ್ರಕಾಶ್ ಪದೇ ಪದೇ ಫೋನ್ ಮಾಡಿ ಹಿಂಸೆ ನೀಡುತ್ತಿದ್ದಾನೆ. ಆಸ್ಪತ್ರೆಗೆ ಬಂದು ವಿಜಯಲಕ್ಷ್ಮಿ ಅವರ ಅಕ್ಕನನ್ನು ಬೈದು, ನಿಂದನೆ ಮಾಡಿದ್ದಾನೆ. ಇದರಿಂದ ತನ್ನ ಚಿಕಿತ್ಸೆಗೆ ತೊಂದರೆ ಆಗುತ್ತಿದೆ ಎಂದು ವಿಜಯಲಕ್ಷ್ಮಿ ದೂರಿದ್ದಾರೆ.