Don't Miss!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುತ್ತಪ್ಪ ರೈ ಬಯೋಪಿಕ್; 3 ಪಾರ್ಟ್ ನಲ್ಲಿ ತಯಾರಾಗುತ್ತಿದೆ 'ಎಂಆರ್' ಸಿನಿಮಾ
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಬಯೋಪಿಕ್ ಬರುತ್ತೆ ಎನ್ನುವ ಸುದ್ದಿ ಅನೇಕ ಸಮಯದಿಂದ ಸದ್ದು ಮಾಡುತ್ತಿದ್ದು. ಆದರೆ ಕಾರಣಾಂತರಗಳಿಂದ ಸಿನಿಮಾ ಪ್ರಾರಂಭವಾಗಿರಲಿಲ್ಲ. ಇದೀಗ ರೈ ಜೀವನಾಧಾರಿತ ಚಿತ್ರಕ್ಕೆ ಕಾಲಕೂಡಿಬಂದಿದೆ.
ಇತ್ತೀಚಿಗಷ್ಟೆ ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾಗೆ ಮುಹೂರ್ತ ನೆರವೇರಿದೆ. ಅಂದಹಾಗೆ ರೈ ಬಯೋಪಿಕ್ ಮಾಡುವ ಧೈರ್ಯ ಮಾಡಿದ್ದಾರೆ ನಿರ್ದೇಶಕ ರವಿ ಶ್ರೀವತ್ಸ. ಚಿತ್ರಕ್ಕೆ ಎಂ ಆರ್ ಟೈಟಲ್ ಫಿಕ್ಸ್ ಆಗಿದ್ದು, ಸೌಭಾಗ್ಯ ಲಕ್ಷ್ಮೀ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಡೆಡ್ಲಿಸೋಮ ಚಿತ್ರದ ನಿರ್ಮಾಪಕ ಶುಭರಾಜಣ್ಣ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ವಿಶೇಷ ಎಂದರೆ ನಿರ್ಮಾಪಕರ ಮಗ ದೀಕ್ಷಿತ್, ಮುತ್ತಪ್ಪ ರೈ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ಚಿತ್ರದ ಫೋಟೋಶೂಟ್ ಮಾಡಿಸುವ ಜೊತೆಗೆ ನಾಯಕನ ಪರಿಚಯ ಕೂಡ ಮಾಡಿಸಲಾಗಿದೆ.
ಎಂಆರ್ ಸಿನಿಮಾ 3 ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದ ಚಿತ್ರೀಕರಣ ಜನವರಿಯಿಂದ ಪ್ರಾರಂಭವಾಗಲಿದ್ದು, ಆಗಸ್ಟ್ ಅಥವಾ ಸೆಪ್ಟಂಬರ್ ನಲ್ಲಿ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆ. ಮುತ್ತಪ್ಪ ರೈ ಬಯೋಪಿಕ್ ಮಾಡಬೇಕು ಎನ್ನುವ ಪ್ರಯತ್ನ ಹಲವು ವರ್ಷಗಳ ಹಿಂದೆಯೇ ನಡೆದಿತ್ತು. ಸುದೀಪ್ ನಟನೆಯಲ್ಲಿ ಅಪ್ಪ ಎನ್ನುವ ಹೆಸರಿನಲ್ಲಿ ಸಿನಿಮಾ ಅನೌನ್ಸ ಆಗಿತ್ತು. ಬಳಿಕ ಸುದೀಪ್ ಬದಲಿಗೆ ವಿವೇಕ್ ಒಬೆರಾಯ್ ಆಯ್ಕೆಯಾಗಿದ್ದರು ಆದರೆ ಸಿನಿಮಾ ಪ್ರಾರಂಭದಲ್ಲೇ ನಿಂತುಹೋಗಿತ್ತು.
Recommended Video
ಇದೀಗ ನಿರ್ದೇಶಕ ರವಿ ಶ್ರೀವತ್ಸ ರೈ ಬಯೋಪಿಕ್ ಮಾಡಲು ನಿರ್ಧರಿಸಿದ್ದು, ಮುಹೂರ್ತ ಕೂಡ ಮಾಡಿದ್ದಾರೆ. ರೈ ಕುರಿತು ಸಿನಿಮಾ ಮಾಡಬೇಕು ಎನ್ನುವುದು ರವಿ ಶ್ರೀವತ್ಸ ಅವರ 20 ವರ್ಷದ ಕನಸಂತೆ. ಈ ಬಗ್ಗೆ ಮುತ್ತಪ್ಪ ರೈ ಅವರಿಗೆ ಕೆಲವು ವರ್ಷಗಳ ಹಿಂದೆಯೇ ಹೇಳಿದ್ದರಂತೆ, ರೈ ಕೂಡ ಮೆಚ್ಚಿಕೊಂಡಿದ್ದರು ಎನ್ನುತ್ತಾರೆ ರವಿ ಶ್ರೀವಾತ್ಸ.