Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುತ್ತಪ್ಪ ರೈ ಬಯೋಪಿಕ್; 3 ಪಾರ್ಟ್ ನಲ್ಲಿ ತಯಾರಾಗುತ್ತಿದೆ 'ಎಂಆರ್' ಸಿನಿಮಾ
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಬಯೋಪಿಕ್ ಬರುತ್ತೆ ಎನ್ನುವ ಸುದ್ದಿ ಅನೇಕ ಸಮಯದಿಂದ ಸದ್ದು ಮಾಡುತ್ತಿದ್ದು. ಆದರೆ ಕಾರಣಾಂತರಗಳಿಂದ ಸಿನಿಮಾ ಪ್ರಾರಂಭವಾಗಿರಲಿಲ್ಲ. ಇದೀಗ ರೈ ಜೀವನಾಧಾರಿತ ಚಿತ್ರಕ್ಕೆ ಕಾಲಕೂಡಿಬಂದಿದೆ.
ಇತ್ತೀಚಿಗಷ್ಟೆ ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾಗೆ ಮುಹೂರ್ತ ನೆರವೇರಿದೆ. ಅಂದಹಾಗೆ ರೈ ಬಯೋಪಿಕ್ ಮಾಡುವ ಧೈರ್ಯ ಮಾಡಿದ್ದಾರೆ ನಿರ್ದೇಶಕ ರವಿ ಶ್ರೀವತ್ಸ. ಚಿತ್ರಕ್ಕೆ ಎಂ ಆರ್ ಟೈಟಲ್ ಫಿಕ್ಸ್ ಆಗಿದ್ದು, ಸೌಭಾಗ್ಯ ಲಕ್ಷ್ಮೀ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಡೆಡ್ಲಿಸೋಮ ಚಿತ್ರದ ನಿರ್ಮಾಪಕ ಶುಭರಾಜಣ್ಣ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ವಿಶೇಷ ಎಂದರೆ ನಿರ್ಮಾಪಕರ ಮಗ ದೀಕ್ಷಿತ್, ಮುತ್ತಪ್ಪ ರೈ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ಚಿತ್ರದ ಫೋಟೋಶೂಟ್ ಮಾಡಿಸುವ ಜೊತೆಗೆ ನಾಯಕನ ಪರಿಚಯ ಕೂಡ ಮಾಡಿಸಲಾಗಿದೆ.
ಎಂಆರ್ ಸಿನಿಮಾ 3 ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದ ಚಿತ್ರೀಕರಣ ಜನವರಿಯಿಂದ ಪ್ರಾರಂಭವಾಗಲಿದ್ದು, ಆಗಸ್ಟ್ ಅಥವಾ ಸೆಪ್ಟಂಬರ್ ನಲ್ಲಿ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆ. ಮುತ್ತಪ್ಪ ರೈ ಬಯೋಪಿಕ್ ಮಾಡಬೇಕು ಎನ್ನುವ ಪ್ರಯತ್ನ ಹಲವು ವರ್ಷಗಳ ಹಿಂದೆಯೇ ನಡೆದಿತ್ತು. ಸುದೀಪ್ ನಟನೆಯಲ್ಲಿ ಅಪ್ಪ ಎನ್ನುವ ಹೆಸರಿನಲ್ಲಿ ಸಿನಿಮಾ ಅನೌನ್ಸ ಆಗಿತ್ತು. ಬಳಿಕ ಸುದೀಪ್ ಬದಲಿಗೆ ವಿವೇಕ್ ಒಬೆರಾಯ್ ಆಯ್ಕೆಯಾಗಿದ್ದರು ಆದರೆ ಸಿನಿಮಾ ಪ್ರಾರಂಭದಲ್ಲೇ ನಿಂತುಹೋಗಿತ್ತು.
Recommended Video
ಇದೀಗ ನಿರ್ದೇಶಕ ರವಿ ಶ್ರೀವತ್ಸ ರೈ ಬಯೋಪಿಕ್ ಮಾಡಲು ನಿರ್ಧರಿಸಿದ್ದು, ಮುಹೂರ್ತ ಕೂಡ ಮಾಡಿದ್ದಾರೆ. ರೈ ಕುರಿತು ಸಿನಿಮಾ ಮಾಡಬೇಕು ಎನ್ನುವುದು ರವಿ ಶ್ರೀವತ್ಸ ಅವರ 20 ವರ್ಷದ ಕನಸಂತೆ. ಈ ಬಗ್ಗೆ ಮುತ್ತಪ್ಪ ರೈ ಅವರಿಗೆ ಕೆಲವು ವರ್ಷಗಳ ಹಿಂದೆಯೇ ಹೇಳಿದ್ದರಂತೆ, ರೈ ಕೂಡ ಮೆಚ್ಚಿಕೊಂಡಿದ್ದರು ಎನ್ನುತ್ತಾರೆ ರವಿ ಶ್ರೀವಾತ್ಸ.