Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಚಂದ್ರನ್, ಅಪೂರ್ವರನ್ನು ಮತ್ತೆ ಒಟ್ಟಿಗೆ ಸೇರಿಸಿದ ತಮಿಳು ನಿರ್ದೇಶಕ
Recommended Video
ನಟ ರವಿಚಂದ್ರನ್ ಈಗ ಸಾಕಷ್ಟು ಸಿನಿಮಾಗಳಲ್ಲಿ ಬಿಜಿ ಇದ್ದಾರೆ. ಅವರ 'ರಾಜೇಂದ್ರ ಪೊನ್ನಪ್ಪ' ಸಿನಿಮಾದ ವಿಭಿನ್ನ ಪೋಸ್ಟರ್ ಗಳು ಕೆಲ ದಿನಗಳ ಹಿಂದೆಯಷ್ಟೆ ಹೊರ ಬಂದಿತ್ತು. ಆದರೆ ಈಗ ಕ್ರೇಜಿ ಸ್ಟಾರ್ ಮತ್ತೊಂದು ಹೊಸ ಸಿನಿಮಾ ಮಾಡುತ್ತಿದ್ದಾರೆ.
ರವಿಚಂದ್ರನ್ ಮತ್ತು ನಟಿ ಅಪೂರ್ವ ಹೊಸ ಸಿನಿಮಾದ ಬಗ್ಗೆ ಈ ಹಿಂದೆಯೇ ಸುದ್ದಿ ಹಬ್ಬಿತ್ತು. ಈಗ ಆ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈ ಚಿತ್ರಕ್ಕೆ 'ಕೀಚಕ' ಎಂಬ ಹೆಸರನ್ನು ಇಡಲಾಗಿದೆಯಂತೆ. ವಿಶೇಷ ಅಂದರೆ ರವಿಚಂದ್ರನ್ ಅವರ ಈ ಸಿನಿಮಾವನ್ನು ತಮಿಳಿನ ನಿರ್ದೇಶಕ ಶಿವರಾಜ್ ಮಾಡುತ್ತಿದ್ದಾರೆ. ಸದ್ಯ ಈ ಚಿತ್ರ ಕಥೆ, ಚಿತ್ರಕಥೆಯ ಹಂತದಲ್ಲಿ ಇದೆ. 'ಕೀಚಕ' ಮಾಸ್ ಜೊತೆಗೆ ಲವ್ ಸ್ಟೋರಿ ಹೊಂದಿರುವ ಸಿನಿಮಾವಾಗಿದೆ. ಮುಂದಿನ ತಿಂಗಳು ಈ ಸಿನಿಮಾ ಸೆಟ್ಟೇರಲಿದೆ.
ನಿರ್ದೇಶಕ ಶಿವರಾಜ್ ಈ ಹಿಂದೆ ಉಪೇಂದ್ರ ನಟನೆಯ 'ಎ' ಸಿನಿಮಾವನ್ನು ತಮಿಳಿನಲ್ಲಿ ರಿಮೇಕ್ ಮಾಡಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾವಾಗಿದೆ. ಉಳಿದಂತೆ, ಮಳವಳ್ಳಿ ಸಾಯಿಕೃಷ್ಣ ಡೈಲಾಗ್ ಬರೆಯಲಿದ್ದಾರೆ. 'ಕುರುಕ್ಷೇತ್ರ', 'ರಾಜೇಂದ್ರ ಪೋನ್ನಪ್ಪ', 'ಕೀಚಕ' ಹೀಗೆ ಒಂದಲ್ಲ ಒಂದು ಸಿನಿಮಾದಲ್ಲಿ ರವಿಚಂದ್ರನ್ ತೊಡಗಿದ್ದಾರೆ.