Don't Miss!
- Automobiles ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- Sports IPL 2024: ಗಾಯದ ಕಾರಣದಿಂದ ಆಟಗಾರ ಲೀಗ್ನಿಂದ ಹೊರ ನಡೆದರೆ ಸಿಗುವ ಹಣವೆಷ್ಟು?
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಚಂದ್ರನ್, ಅಪೂರ್ವರನ್ನು ಮತ್ತೆ ಒಟ್ಟಿಗೆ ಸೇರಿಸಿದ ತಮಿಳು ನಿರ್ದೇಶಕ
Recommended Video
ನಟ ರವಿಚಂದ್ರನ್ ಈಗ ಸಾಕಷ್ಟು ಸಿನಿಮಾಗಳಲ್ಲಿ ಬಿಜಿ ಇದ್ದಾರೆ. ಅವರ 'ರಾಜೇಂದ್ರ ಪೊನ್ನಪ್ಪ' ಸಿನಿಮಾದ ವಿಭಿನ್ನ ಪೋಸ್ಟರ್ ಗಳು ಕೆಲ ದಿನಗಳ ಹಿಂದೆಯಷ್ಟೆ ಹೊರ ಬಂದಿತ್ತು. ಆದರೆ ಈಗ ಕ್ರೇಜಿ ಸ್ಟಾರ್ ಮತ್ತೊಂದು ಹೊಸ ಸಿನಿಮಾ ಮಾಡುತ್ತಿದ್ದಾರೆ.
ರವಿಚಂದ್ರನ್ ಮತ್ತು ನಟಿ ಅಪೂರ್ವ ಹೊಸ ಸಿನಿಮಾದ ಬಗ್ಗೆ ಈ ಹಿಂದೆಯೇ ಸುದ್ದಿ ಹಬ್ಬಿತ್ತು. ಈಗ ಆ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈ ಚಿತ್ರಕ್ಕೆ 'ಕೀಚಕ' ಎಂಬ ಹೆಸರನ್ನು ಇಡಲಾಗಿದೆಯಂತೆ. ವಿಶೇಷ ಅಂದರೆ ರವಿಚಂದ್ರನ್ ಅವರ ಈ ಸಿನಿಮಾವನ್ನು ತಮಿಳಿನ ನಿರ್ದೇಶಕ ಶಿವರಾಜ್ ಮಾಡುತ್ತಿದ್ದಾರೆ. ಸದ್ಯ ಈ ಚಿತ್ರ ಕಥೆ, ಚಿತ್ರಕಥೆಯ ಹಂತದಲ್ಲಿ ಇದೆ. 'ಕೀಚಕ' ಮಾಸ್ ಜೊತೆಗೆ ಲವ್ ಸ್ಟೋರಿ ಹೊಂದಿರುವ ಸಿನಿಮಾವಾಗಿದೆ. ಮುಂದಿನ ತಿಂಗಳು ಈ ಸಿನಿಮಾ ಸೆಟ್ಟೇರಲಿದೆ.
ನಿರ್ದೇಶಕ ಶಿವರಾಜ್ ಈ ಹಿಂದೆ ಉಪೇಂದ್ರ ನಟನೆಯ 'ಎ' ಸಿನಿಮಾವನ್ನು ತಮಿಳಿನಲ್ಲಿ ರಿಮೇಕ್ ಮಾಡಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾವಾಗಿದೆ. ಉಳಿದಂತೆ, ಮಳವಳ್ಳಿ ಸಾಯಿಕೃಷ್ಣ ಡೈಲಾಗ್ ಬರೆಯಲಿದ್ದಾರೆ. 'ಕುರುಕ್ಷೇತ್ರ', 'ರಾಜೇಂದ್ರ ಪೋನ್ನಪ್ಪ', 'ಕೀಚಕ' ಹೀಗೆ ಒಂದಲ್ಲ ಒಂದು ಸಿನಿಮಾದಲ್ಲಿ ರವಿಚಂದ್ರನ್ ತೊಡಗಿದ್ದಾರೆ.