Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ 'ಜಟ್ಟ' ಗಿರಿರಾಜ್ ಸಿನಿಮಾ
ಸೂಕ್ಷ್ಮ ಕತೆಗಳ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಒಟ್ಟಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಮೊನ್ನೆಯಷ್ಟೆ ರವಿಚಂದ್ರನ್ ಹುಟ್ಟುಹಬ್ಬಕ್ಕೆ ರವಿಚಂದ್ರಬ್ ಅವರ ಜೊತೆಗಿದ್ದ ಚಿತ್ರವನ್ನು ಅಪ್ಲೋಡ್ ಮಾಡಿದ್ದ ಗಿರಿರಾಜ್ ರವಿಚಂದ್ರನ್ ಅವರಿಗೆ ವಿಶ್ ಮಾಡಿದ್ದರು.
ಕ್ರೇಜಿ ಸ್ಟಾರ್ ರವಿಚಂದ್ರನ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಅಕೌಂಟ್
ಜಟ್ಟ, ಅದ್ವೈತ, ಮೈತ್ರಿ, ಅಮರಾವತಿ ಅಂಥಹಾ ಸೂಕ್ಷ್ಮ ಸಿನಿಮಾಗಳನ್ನು ನಿರ್ದೇಶಿಸಿರುವ ಬಿ.ಎಂ.ಗಿರಿರಾಜ್ ಅವರು ಕ್ರೇಜಿಸ್ಟಾರ್ ಜೊತೆಗೂಡಿರುವುದೇ ಕುತೂಹಲ ಕೆರಳಿಸಿದೆ.
ಇತ್ತೀಚೆಗಷ್ಟೆ ಬಿ.ಎಂ.ಗಿರೀಶ್, ರವಿಚಂದ್ರನ್ ಅವರನ್ನು ಭೇಟಿಯಾಗಿದ್ದು, ರವಿಚಂದ್ರನ್ ಅವರಿಗೆ ಕತೆ ಹೇಳಿದ್ದಾರೆ. ಮುಂದಿನ ಹಂತದ ಮಾತುಕತೆ ನಡೆಸಬೇಕಿದೆ. ಕತೆ ರವಿಚಂದ್ರನ್ ಅವರಿಗೆ ಇಷ್ಟವಾಗಿದೆ ಎನ್ನಲಾಗಿದೆ.
ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಂದ ರವಿಚಂದ್ರನ್ಗೊಂದು ಬೇಡಿಕೆ
ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ಬಿ.ಎಂ.ಗಿರಿರಾಜ್ ಅವರು, 1857 ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಕತೆ ಇದಾಗಿದ್ದು, ಸಿನಿಮಾಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದಿದ್ದಾರೆ. ನಟಿಸಲು ರವಿಚಂದ್ರನ್ ಓಕೆ ಎಂದರೆ ಬಹುತೇಕ ಇದೇ ಮೊದಲ ಬಾರಿಗೆ ಐತಿಹಾಸಿಕ ಹಿನ್ನೆಲೆಯ ಕತೆಯ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದಂತಾಗುತ್ತದೆ.