Don't Miss!
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Finance Lok Sabha Election 2024: ಡಿಜಿಲಾಕರ್ಗಾಗಿ ಡಿಜಿಟಲ್ ವೋಟರ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ 'ಜಟ್ಟ' ಗಿರಿರಾಜ್ ಸಿನಿಮಾ
ಸೂಕ್ಷ್ಮ ಕತೆಗಳ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಒಟ್ಟಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಮೊನ್ನೆಯಷ್ಟೆ ರವಿಚಂದ್ರನ್ ಹುಟ್ಟುಹಬ್ಬಕ್ಕೆ ರವಿಚಂದ್ರಬ್ ಅವರ ಜೊತೆಗಿದ್ದ ಚಿತ್ರವನ್ನು ಅಪ್ಲೋಡ್ ಮಾಡಿದ್ದ ಗಿರಿರಾಜ್ ರವಿಚಂದ್ರನ್ ಅವರಿಗೆ ವಿಶ್ ಮಾಡಿದ್ದರು.
ಕ್ರೇಜಿ ಸ್ಟಾರ್ ರವಿಚಂದ್ರನ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಅಕೌಂಟ್
ಜಟ್ಟ, ಅದ್ವೈತ, ಮೈತ್ರಿ, ಅಮರಾವತಿ ಅಂಥಹಾ ಸೂಕ್ಷ್ಮ ಸಿನಿಮಾಗಳನ್ನು ನಿರ್ದೇಶಿಸಿರುವ ಬಿ.ಎಂ.ಗಿರಿರಾಜ್ ಅವರು ಕ್ರೇಜಿಸ್ಟಾರ್ ಜೊತೆಗೂಡಿರುವುದೇ ಕುತೂಹಲ ಕೆರಳಿಸಿದೆ.
ಇತ್ತೀಚೆಗಷ್ಟೆ ಬಿ.ಎಂ.ಗಿರೀಶ್, ರವಿಚಂದ್ರನ್ ಅವರನ್ನು ಭೇಟಿಯಾಗಿದ್ದು, ರವಿಚಂದ್ರನ್ ಅವರಿಗೆ ಕತೆ ಹೇಳಿದ್ದಾರೆ. ಮುಂದಿನ ಹಂತದ ಮಾತುಕತೆ ನಡೆಸಬೇಕಿದೆ. ಕತೆ ರವಿಚಂದ್ರನ್ ಅವರಿಗೆ ಇಷ್ಟವಾಗಿದೆ ಎನ್ನಲಾಗಿದೆ.
ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಂದ ರವಿಚಂದ್ರನ್ಗೊಂದು ಬೇಡಿಕೆ
ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ಬಿ.ಎಂ.ಗಿರಿರಾಜ್ ಅವರು, 1857 ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಕತೆ ಇದಾಗಿದ್ದು, ಸಿನಿಮಾಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದಿದ್ದಾರೆ. ನಟಿಸಲು ರವಿಚಂದ್ರನ್ ಓಕೆ ಎಂದರೆ ಬಹುತೇಕ ಇದೇ ಮೊದಲ ಬಾರಿಗೆ ಐತಿಹಾಸಿಕ ಹಿನ್ನೆಲೆಯ ಕತೆಯ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದಂತಾಗುತ್ತದೆ.