Don't Miss!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ 'ಜಟ್ಟ' ಗಿರಿರಾಜ್ ಸಿನಿಮಾ
ಸೂಕ್ಷ್ಮ ಕತೆಗಳ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಒಟ್ಟಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಮೊನ್ನೆಯಷ್ಟೆ ರವಿಚಂದ್ರನ್ ಹುಟ್ಟುಹಬ್ಬಕ್ಕೆ ರವಿಚಂದ್ರಬ್ ಅವರ ಜೊತೆಗಿದ್ದ ಚಿತ್ರವನ್ನು ಅಪ್ಲೋಡ್ ಮಾಡಿದ್ದ ಗಿರಿರಾಜ್ ರವಿಚಂದ್ರನ್ ಅವರಿಗೆ ವಿಶ್ ಮಾಡಿದ್ದರು.
ಕ್ರೇಜಿ ಸ್ಟಾರ್ ರವಿಚಂದ್ರನ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಅಕೌಂಟ್
ಜಟ್ಟ, ಅದ್ವೈತ, ಮೈತ್ರಿ, ಅಮರಾವತಿ ಅಂಥಹಾ ಸೂಕ್ಷ್ಮ ಸಿನಿಮಾಗಳನ್ನು ನಿರ್ದೇಶಿಸಿರುವ ಬಿ.ಎಂ.ಗಿರಿರಾಜ್ ಅವರು ಕ್ರೇಜಿಸ್ಟಾರ್ ಜೊತೆಗೂಡಿರುವುದೇ ಕುತೂಹಲ ಕೆರಳಿಸಿದೆ.
ಇತ್ತೀಚೆಗಷ್ಟೆ ಬಿ.ಎಂ.ಗಿರೀಶ್, ರವಿಚಂದ್ರನ್ ಅವರನ್ನು ಭೇಟಿಯಾಗಿದ್ದು, ರವಿಚಂದ್ರನ್ ಅವರಿಗೆ ಕತೆ ಹೇಳಿದ್ದಾರೆ. ಮುಂದಿನ ಹಂತದ ಮಾತುಕತೆ ನಡೆಸಬೇಕಿದೆ. ಕತೆ ರವಿಚಂದ್ರನ್ ಅವರಿಗೆ ಇಷ್ಟವಾಗಿದೆ ಎನ್ನಲಾಗಿದೆ.
ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಂದ ರವಿಚಂದ್ರನ್ಗೊಂದು ಬೇಡಿಕೆ
ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ಬಿ.ಎಂ.ಗಿರಿರಾಜ್ ಅವರು, 1857 ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಕತೆ ಇದಾಗಿದ್ದು, ಸಿನಿಮಾಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದಿದ್ದಾರೆ. ನಟಿಸಲು ರವಿಚಂದ್ರನ್ ಓಕೆ ಎಂದರೆ ಬಹುತೇಕ ಇದೇ ಮೊದಲ ಬಾರಿಗೆ ಐತಿಹಾಸಿಕ ಹಿನ್ನೆಲೆಯ ಕತೆಯ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದಂತಾಗುತ್ತದೆ.