Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕನಸು ನನಸು
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳು ಕಾದುಕಾದು ಸುಸ್ತಾಗಿದ್ದಾರೆ. ತೆರೆಯ ಮೇಲೆ ದ್ರಾಕ್ಷಿ, ಹೂವು, ಹಣ್ಣು ಕಾಯಿ ನೋಡದೆ ತತ್ತರಿಸಿಹೋಗಿದ್ದಾರೆ. ಅವೆಲ್ಲವನ್ನೂ ರೊಮ್ಯಾಂಟಿಕ್ ಆಗಿ ತೋರಿಸುವ ಕಲೆ ರವಿಚಂದ್ರನ್ ಅವರಿಗೆ ಬಿಟ್ಟರೆ ಇನ್ಯಾರಿಗೆ ಗೊತ್ತು. 'ಕ್ರೇಜಿಲೋಕ' ಚಿತ್ರದ ಬಳಿಕ ಅವರ ಒಂದೇ ಒಂದು ಚಿತ್ರವೂ ಬಿಡುಗಡೆಯಾಗಿಲ್ಲ. 'ಮಂಜಿನಹನಿ' ಧ್ಯಾನದಲ್ಲೇ ರವಿಮಾಮ ಕಳೆದು ಹೋದರು. ಈಗ ಸುದೀಪ್ ಜೊತೆಗೆ 'ಮಾಣಿಕ್ಯ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಅವರ ಮತ್ತೊಂದು ಬಹುನಿರೀಕ್ಷಿತ ಚಿತ್ರ ಕ್ರೇಜಿಸ್ಟಾರ್ ಸಹ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ಸಂಕ್ರಾಂತಿಗೆ ಪ್ರೇಕ್ಷಕರ ಮುಂದೆ ತರಲು ರವಿಚಂದ್ರನ್ ಪ್ರಯತ್ನಿಸುತ್ತಿದ್ದಾರೆ. ಸದ್ಯಕ್ಕೆ ಚಿತ್ರದ ಎಡಿಟಿಂಗ್ ಕಾರ್ಯ ಭರದಿಂದ ಸಾಗುತ್ತಿದೆ. ಚಿತ್ರಕ್ಕೆ ಸಂಗೀತ ಹಾಗೂ ನಿರ್ದೇಶನ ರವಿಚಂದ್ರನ್ ಅವರದು.
ರವಿಚಂದ್ರನ್ ಅವರು ಕಳೆದೆರಡು ವರ್ಷಗಳಿಂದ ಹುಟ್ಟುಹಬ್ಬ ಸಂಭ್ರಮವನ್ನೂ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲಿಲ್ಲ. ಒಟ್ಟಾರೆಯಾಗಿ ಕ್ರೇಜಿಸ್ಟಾರ್ ಅಭಿಮಾನಿಗಳು ಸಾಕಷ್ಟು ಕಾದಿದ್ದಾರೆ. ಸಂಕ್ರಾಂತಿಗೆ ಅವರಿಗೆ ಎಳ್ಳುಬೆಲ್ಲ ಗ್ಯಾರಂಟಿ ಸಿಗಲಿದೆ. ಅದು ಕ್ರೇಜಿಸ್ಟಾರ್ ಚಿತ್ರದ ಮೂಲಕವಾಗಲಿ ಎಂಬುದು ನಮ್ಮ ಆಶಯ. (ಒನ್ಇಂಡಿಯಾ ಕನ್ನಡ)