Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಹಾಗೂ 'ನಾಗರಹಾವು' ಚಿತ್ರಕ್ಕಿರುವ ನಂಟಿನ ಬಗ್ಗೆ ರವಿಚಂದ್ರನ್ ಮಾತು
'ನಾಗರಹಾವು' ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ಸುದ್ದಿಗೋಷ್ಟಿಯನ್ನು ಮಾಡಿದಾಗ ವಿಷ್ಣುವರ್ಧನ್ ಬಗ್ಗೆ ರವಿಚಂದ್ರನ್ ಮಾತನಾಡಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದರು. ನಾಳೆ ಬಿಡುಗಡೆ ಆಗುತ್ತಿರುವ 'ನಾಗರಹಾವು' ಸಿನಿಮಾ ಬಗ್ಗೆ ರವಿಚಂದ್ರನ್ ಪತ್ರದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅದರಲ್ಲಿ 'ನಾಗರಹಾವು' ಚಿತ್ರಕ್ಕೂ ವಿಷ್ಣುವರ್ಧನ್ ಅವರಿಗಿದ್ದ ನಂಟಿನ ಬಗ್ಗೆ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ವೀರಾಸ್ವಾಮಿ ಮತ್ತು ವಿಷ್ಣುವರ್ಧನ್ ಇಬ್ಬರಿಗೂ ಇದ್ದ ಸಂಬಂಧ ಎಂತಹದ್ದೂ ಎನ್ನುವುದನ್ನು ತಿಳಿಸಿಕೊಟ್ಟಿದ್ದಾರೆ. "ಕೆಲವೇ ದಿನಗಳ ಹಿಂದೆ ಪ್ರೆಸ್ ಮೀಟ್ ನಲ್ಲಿ ನಾನು ವಿಷ್ಣುವರ್ಧನ್ ಬಗ್ಗೆ ಮಾತನಾಡಿಲ್ಲ ಎಂದು ಸಾಕಷ್ಟು ಜನರು ಬೇಸರ ವ್ಯಕ್ತ ಪಡಿಸಿದ್ದರು. 'ನಾಗರಹಾವು' ಚಿತ್ರದ ಬಗ್ಗೆ ನಾನು ಏನೇ ಹೇಳಿದರು ಕಡಿಮೆ"
'ವಿಷ್ಣುವರ್ಧನ್ ಇಲ್ಲದೆ 'ನಾಗರಹಾವು' ಚಿತ್ರ ಆಗುತ್ತಲೇ ಇರಲಿಲ್ಲ.ಈ ಬಾವನೆ ತಂದೆಯವರಲ್ಲೂ ಇತ್ತು. ವಿಷ್ಣು ಅವರಷ್ಟು ರಾಮಚಾರಿ ಪಾತ್ರಕ್ಕೆ ನ್ಯಾಯ ಒದಗಿಸಲು ಮತ್ಯಾರಿಗೂ ಸಾಧ್ಯವೇ ಇಲ್ಲ. ವಿಷ್ಣುವರ್ಧನ್ ಮತ್ತು ತಂದೆಯವರು ಉತ್ತಮ ಬಾಂದವ್ಯವನ್ನು ಹೊಂದಿದ್ದರು. ಅವರನ್ನು ನಮ್ಮ ತಂದೆ ನನ್ನ ದೊಡ್ಡ ಮಗ ಎನ್ನುತ್ತಿದ್ದರು"..
ಅಷ್ಟರ ಮಟ್ಟಿಗೆ ಇಬ್ಬರ ಬಾಂದವ್ಯ ಬೆಸೆದುಕೊಂಡಿತ್ತು ಎನ್ನುವುದನ್ನು ನಟ ರವಿಚಂದ್ರನ್ ಸಿನಿಮಾ ರೀ ರಿಲೀಸ್ ಆಗುವ ಸಮಯದಲ್ಲಿ ಹೇಳಿಕೊಂಡಿದ್ದಾರೆ.