Don't Miss!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಹಾಗೂ 'ನಾಗರಹಾವು' ಚಿತ್ರಕ್ಕಿರುವ ನಂಟಿನ ಬಗ್ಗೆ ರವಿಚಂದ್ರನ್ ಮಾತು
'ನಾಗರಹಾವು' ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ಸುದ್ದಿಗೋಷ್ಟಿಯನ್ನು ಮಾಡಿದಾಗ ವಿಷ್ಣುವರ್ಧನ್ ಬಗ್ಗೆ ರವಿಚಂದ್ರನ್ ಮಾತನಾಡಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದರು. ನಾಳೆ ಬಿಡುಗಡೆ ಆಗುತ್ತಿರುವ 'ನಾಗರಹಾವು' ಸಿನಿಮಾ ಬಗ್ಗೆ ರವಿಚಂದ್ರನ್ ಪತ್ರದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅದರಲ್ಲಿ 'ನಾಗರಹಾವು' ಚಿತ್ರಕ್ಕೂ ವಿಷ್ಣುವರ್ಧನ್ ಅವರಿಗಿದ್ದ ನಂಟಿನ ಬಗ್ಗೆ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ವೀರಾಸ್ವಾಮಿ ಮತ್ತು ವಿಷ್ಣುವರ್ಧನ್ ಇಬ್ಬರಿಗೂ ಇದ್ದ ಸಂಬಂಧ ಎಂತಹದ್ದೂ ಎನ್ನುವುದನ್ನು ತಿಳಿಸಿಕೊಟ್ಟಿದ್ದಾರೆ. "ಕೆಲವೇ ದಿನಗಳ ಹಿಂದೆ ಪ್ರೆಸ್ ಮೀಟ್ ನಲ್ಲಿ ನಾನು ವಿಷ್ಣುವರ್ಧನ್ ಬಗ್ಗೆ ಮಾತನಾಡಿಲ್ಲ ಎಂದು ಸಾಕಷ್ಟು ಜನರು ಬೇಸರ ವ್ಯಕ್ತ ಪಡಿಸಿದ್ದರು. 'ನಾಗರಹಾವು' ಚಿತ್ರದ ಬಗ್ಗೆ ನಾನು ಏನೇ ಹೇಳಿದರು ಕಡಿಮೆ"
'ವಿಷ್ಣುವರ್ಧನ್ ಇಲ್ಲದೆ 'ನಾಗರಹಾವು' ಚಿತ್ರ ಆಗುತ್ತಲೇ ಇರಲಿಲ್ಲ.ಈ ಬಾವನೆ ತಂದೆಯವರಲ್ಲೂ ಇತ್ತು. ವಿಷ್ಣು ಅವರಷ್ಟು ರಾಮಚಾರಿ ಪಾತ್ರಕ್ಕೆ ನ್ಯಾಯ ಒದಗಿಸಲು ಮತ್ಯಾರಿಗೂ ಸಾಧ್ಯವೇ ಇಲ್ಲ. ವಿಷ್ಣುವರ್ಧನ್ ಮತ್ತು ತಂದೆಯವರು ಉತ್ತಮ ಬಾಂದವ್ಯವನ್ನು ಹೊಂದಿದ್ದರು. ಅವರನ್ನು ನಮ್ಮ ತಂದೆ ನನ್ನ ದೊಡ್ಡ ಮಗ ಎನ್ನುತ್ತಿದ್ದರು"..
ಅಷ್ಟರ ಮಟ್ಟಿಗೆ ಇಬ್ಬರ ಬಾಂದವ್ಯ ಬೆಸೆದುಕೊಂಡಿತ್ತು ಎನ್ನುವುದನ್ನು ನಟ ರವಿಚಂದ್ರನ್ ಸಿನಿಮಾ ರೀ ರಿಲೀಸ್ ಆಗುವ ಸಮಯದಲ್ಲಿ ಹೇಳಿಕೊಂಡಿದ್ದಾರೆ.