Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಥ್ರಿಲ್ಲರ್ ಚಿತ್ರದಲ್ಲಿ ರವಿಚಂದ್ರನ್ ನಟನೆ.!
ಕ್ರೇಜಿಸ್ಟಾರ್ ರವಿಚಂದ್ರನ್ ತಾವೇ ನಿರ್ದೇಶನ ಮಾಡಿ, ನಟಿಸುತ್ತಿರುವ 'ರಾಜೇಂದ್ರ ಪೊನ್ನಪ್ಪ' ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಇದೀಗ, ಮತ್ತೊಂದು ಹೊಸ ಸಿನಿಮಾವನ್ನ ಕೈಗೆತ್ತಿಕೊಳ್ಳುತ್ತಿದ್ದು, ಇದು ಥ್ರಿಲ್ಲರ್ ಕಥೆಯಾಗಿರುವುದು ವಿಶೇಷ. .
ಈ ಹಿಂದೆ 'ಜಿಗರ್ ಥಂಡಾ' ಚಿತ್ರದ ಮೂಲಕ ನಿರ್ದೇಶಕರಾದ ಶಿವಗಣೇಶ್ ಎರಡನೇ ಸಿನಿಮಾ ಆರಂಭಿಸಿದ್ದು, ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ನಟಿಸಲಿದ್ದಾರೆ.
ಈ ಚಿತ್ರವನ್ನ ಕನ್ನಡದ ಖ್ಯಾತ ನಿರ್ಮಾಪಕ ಕೆ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಕೆ ಮಂಜು ಮಗ ನಟಿಸುತ್ತಿರುವ 'ಪಡ್ಡೆಹುಲಿ' ಚಿತ್ರದಲ್ಲಿ ರವಿಮಾಮಾ ಅಭಿನಯಿಸುತ್ತಿದ್ದಾರೆ. ಅದ್ರ ಜೊತೆ ಮಂಜು ನಿರ್ಮಾಣದಲ್ಲಿ ಸೆಟ್ಟೇರಲಿರುವ ಚಿತ್ರದಲ್ಲೂ ಕ್ರೇಜಿಸ್ಟಾರ್ ಬಣ್ಣ ಹಚ್ಚುತ್ತಿದ್ದಾರೆ.
2016ರಲ್ಲಿ ಬಿಡುಗಡಯಾಗಿದ್ದ ತಮಿಳಿನ 'ಡಿ-16' ಚಿತ್ರದ ಕಥಾವಸ್ತು ಚೆನ್ನಾಗಿದ್ದು ಇದರಿಂದ ಸ್ಫೂರ್ತಿ ಪಡೆದು ತಮ್ಮ ಎರಡನೇ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದಾಗಿ ನಿರ್ದೇಶಕ ಶಿವ ಗಣೇಶ್ ಹೇಳಿದ್ದಾರೆ. ಇದೊಂದು ಥ್ರಿಲ್ಲರ್ ಚಿತ್ರವಾಗಿದ್ದು ಇದಕ್ಕೆ ರವಿಚಂದ್ರನ್ ಅವರು ಹೊಂದುತ್ತಾರೆ ಎಂಬುದು ಅವರ ನಂಬಿಕೆ. ಎಲ್ಲ ಅಂದುಕೊಂಡಂತೆ ಆದ್ರೆ, ಜುಲೈ ತಿಂಗಳಲ್ಲಿ ಈ ಸಿನಿಮಾ ಶುರುವಾಗಲಿದೆ.
ಇನ್ನುಳಿದಂತೆ
ಮುನಿರತ್ನ
ನಿರ್ಮಾಣದ
'ಕುರುಕ್ಷೇತ್ರ'
ಚಿತ್ರದಲ್ಲಿ
ರವಿ
ಚಂದ್ರನ್
ಕೃಷ್ಣನ
ಪಾತ್ರವನ್ನ
ನಿಭಾಯಿಸಿದ್ದಾರೆ.
ಇದರ
ಜೊತೆ
ಮತ್ತೆರಡು
ಹೊಸ
ಪ್ರಾಜೆಕ್ಟ್
ಗಳು
ಕೂಡ
ರವಿಚಂದ್ರನ್
ಬಳಿ
ಇದೆ.