Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಹೀರಾತು ಕ್ಷೇತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಕಲರವ
ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಹಿರಿತೆರೆ ಸೇರಿದಂತೆ ಕಿರುತೆರೆಯಲ್ಲೂ ಕೂಡ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆ ಜೊತೆಗೆ ಇದೀಗ ಹೊಸದಾಗಿ ಜಾಹೀರಾತು ಕ್ಷೇತ್ರಗಳಲ್ಲೂ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ.
ಇದೀಗ ಮತ್ತೊಮ್ಮೆ ಜಾಹೀರಾತಿನಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿದ್ದಾರೆ. ಈ ಬಾರಿ ಮೈಸೂರಿನಲ್ಲಿ ಆರಂಭಗೊಳ್ಳಲಿರುವ 'ಗೋಲ್ಡನ್ ಪ್ರಾಪರ್ಟಿ ಕಾಸ್ಟಲ್ ವಸತಿ ಸಮುಚ್ಛಯ'ದ ಬ್ರಾಂಡ್ ಅಂಬಾಸಿಡರ್ ಆಗುವ ಮೂಲಕ ಎರಡನೇ ಬಾರಿಗೆ ಜಾಹೀರಾತು ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ.
ಜೊತೆಗೆ ಈ ವಸತಿ ಸಮುಚ್ಛಯಗಳ ಪೂರ್ತಿ ಡಿಸೈನಿಂಗ್ ಮುಂತಾದವುಗಳನ್ನು ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಿರ್ವಹಿಸಲಿದ್ದಾರಂತೆ.[ಕಾಸಿಲ್ಲದೆ ರೋಗ ವಾಸಿ ಮಾಡಲಿದ್ದಾರೆ ರವಿಚಂದ್ರನ್ ಸಾರ್.!]
ಪುನೀತ್ ರಾಜ್ ಕುಮಾರ್, ರಾಧಿಕಾ ಪಂಡಿತ್, ರಚಿತಾ ರಾಮ್, ಉಪೇಂದ್ರ ನಂತರ ಇದೀಗ ನಮ್ಮ ಪ್ರೀತಿಯ ರವಿಮಾಮ ಕೂಡ ಎರಡನೇ ಬಾರಿ ಜಾಹೀರಾತಿನಲ್ಲಿ ಮಿಂಚಿದ್ದಾರೆ.
ಅಂದಹಾಗೆ ಈ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಡೆಂಗ್ಯೂ ಜ್ವರ ಹಾಗೂ ಚಿಕೂನ್ ಗುನ್ಯ ಮುಂತಾದವುಗಳ ಕುರಿತಾಗಿ ಅರಿವು ಮೂಡಿಸುವ ಜಾಹೀರಾತಿನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಈಗಾಗಲೇ ಕಾಣಿಸಿಕೊಂಡಿದ್ದರು.
ಒಟ್ನಲ್ಲಿ ಕಿರುತೆರೆ ಕ್ಷೇತ್ರದ ಡಾನ್ಸಿಂಗ್ ಸ್ಟಾರ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಜಡ್ಜ್ ಮಾಡುವ ಮೂಲಕ ಎಲ್ಲರ ಮನೆಮಾತಾಗಿರುವ ಕ್ರೇಜಿಸ್ಟಾರ್ ರವಿಮಾಮ ಅವರು ಇದೀಗ ಜಾಹೀರಾತು ಕ್ಷೇತ್ರದಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲರ ಮನೆ-ಮನಗಳಲ್ಲಿ ನೆಲೆಸಲಿದ್ದಾರೆ.