Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಹೀರಾತು ಕ್ಷೇತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಕಲರವ
ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಹಿರಿತೆರೆ ಸೇರಿದಂತೆ ಕಿರುತೆರೆಯಲ್ಲೂ ಕೂಡ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆ ಜೊತೆಗೆ ಇದೀಗ ಹೊಸದಾಗಿ ಜಾಹೀರಾತು ಕ್ಷೇತ್ರಗಳಲ್ಲೂ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ.
ಇದೀಗ ಮತ್ತೊಮ್ಮೆ ಜಾಹೀರಾತಿನಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿದ್ದಾರೆ. ಈ ಬಾರಿ ಮೈಸೂರಿನಲ್ಲಿ ಆರಂಭಗೊಳ್ಳಲಿರುವ 'ಗೋಲ್ಡನ್ ಪ್ರಾಪರ್ಟಿ ಕಾಸ್ಟಲ್ ವಸತಿ ಸಮುಚ್ಛಯ'ದ ಬ್ರಾಂಡ್ ಅಂಬಾಸಿಡರ್ ಆಗುವ ಮೂಲಕ ಎರಡನೇ ಬಾರಿಗೆ ಜಾಹೀರಾತು ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ.
ಜೊತೆಗೆ ಈ ವಸತಿ ಸಮುಚ್ಛಯಗಳ ಪೂರ್ತಿ ಡಿಸೈನಿಂಗ್ ಮುಂತಾದವುಗಳನ್ನು ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಿರ್ವಹಿಸಲಿದ್ದಾರಂತೆ.[ಕಾಸಿಲ್ಲದೆ ರೋಗ ವಾಸಿ ಮಾಡಲಿದ್ದಾರೆ ರವಿಚಂದ್ರನ್ ಸಾರ್.!]
ಪುನೀತ್ ರಾಜ್ ಕುಮಾರ್, ರಾಧಿಕಾ ಪಂಡಿತ್, ರಚಿತಾ ರಾಮ್, ಉಪೇಂದ್ರ ನಂತರ ಇದೀಗ ನಮ್ಮ ಪ್ರೀತಿಯ ರವಿಮಾಮ ಕೂಡ ಎರಡನೇ ಬಾರಿ ಜಾಹೀರಾತಿನಲ್ಲಿ ಮಿಂಚಿದ್ದಾರೆ.
ಅಂದಹಾಗೆ ಈ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಡೆಂಗ್ಯೂ ಜ್ವರ ಹಾಗೂ ಚಿಕೂನ್ ಗುನ್ಯ ಮುಂತಾದವುಗಳ ಕುರಿತಾಗಿ ಅರಿವು ಮೂಡಿಸುವ ಜಾಹೀರಾತಿನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಈಗಾಗಲೇ ಕಾಣಿಸಿಕೊಂಡಿದ್ದರು.
ಒಟ್ನಲ್ಲಿ ಕಿರುತೆರೆ ಕ್ಷೇತ್ರದ ಡಾನ್ಸಿಂಗ್ ಸ್ಟಾರ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಜಡ್ಜ್ ಮಾಡುವ ಮೂಲಕ ಎಲ್ಲರ ಮನೆಮಾತಾಗಿರುವ ಕ್ರೇಜಿಸ್ಟಾರ್ ರವಿಮಾಮ ಅವರು ಇದೀಗ ಜಾಹೀರಾತು ಕ್ಷೇತ್ರದಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲರ ಮನೆ-ಮನಗಳಲ್ಲಿ ನೆಲೆಸಲಿದ್ದಾರೆ.