Don't Miss!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗತಿಹಳ್ಳಿ ಚಂದ್ರಶೇಖರ್ ವಿದ್ಯಾರ್ಥಿಗಳಿಗೆ ಸಿನಿಪಾಠ ಮಾಡಿದ ಕ್ರೇಜಿಸ್ಟಾರ್
ಸಿನಿಮಾ ಇಂಡಸ್ಟ್ರಿಗೆ ಬರಬೇಕು, ಸಿನಿಮಾ ನಿರ್ದೇಶಿಸಬೇಕು, ಸಿನಿಮಾದಲ್ಲಿ ನಟಿಸಬೇಕು ಅಥವಾ ಸಿನಿಮಾಗಾಗಿ ಬರೆಯಬೇಕು ಎಂಬ ಆಸೆಗಳೊಂದಿಗೆ ಅದೇಷ್ಟೊ ಜನ ಯುವಕರು ಗಾಂಧಿನಗರದಲ್ಲಿ ಸುತ್ತಾಡುತ್ತಿದ್ದಾರೆ. ಚಿತ್ರರಂಗಕ್ಕೆ ಭವಿಷ್ಯದ ಪ್ರತಿಭೆಗಳನ್ನು ತಯಾರು ಮಾಡುವವರ ಪೈಕಿ ನಾಗತಿಹಳ್ಳಿ ಚಂದ್ರಶೇಖರ್ ಅವರ 'ಟೆಂಟ್ ಸಿನಿಮಾ'ವೂ ಒಂದಾಗಿದೆ.
ಕನ್ನಡದ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಾರಥ್ಯದ 'ಟೆಂಟ್ ಸಿನಿಮಾ ಶಾಲೆ'ಯಲ್ಲಿ ಸಿನಿಮಾ ಕಾರ್ಯಗಾರ ನಡೆಯುತ್ತಿದೆ. ಸೀಮಿತ ವಿದ್ಯಾರ್ಥಿಗಳಿಗೆ ದಾಖಲಾತಿ ನೀಡಿ ಚಿತ್ರ ನಿರ್ಮಾಣದ ಕುರಿತು ಅನುಭವಿ ತಂತ್ರಜ್ಞ-ಕಲಾವಿದರಿಂದ ತರಬೇತಿ ನೀಡಲಾಗುತ್ತದೆ.
ಪುರುಷ ಪ್ರಧಾನ ಚಿತ್ರರಂಗದಲ್ಲಿ ನಟಿಯರ ಸಾಧನೆ ದಾಖಲಾಗಬೇಕು: ನಾಗತಿಹಳ್ಳಿ ಚಂದ್ರಶೇಖರ್
ಆಗಸ್ಟ್ 29 ರಂದು ಭಾನುವಾರ ಟೆಂಟ್ ಸಿನಿಮಾ ಶಾಲೆಯಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಟೆಂಟ್ ಸಿನಿಮಾದ ವಿದ್ಯಾರ್ಥಿಗಳೊಂದಿಗೆ ತಮ್ಮ ಸಿನಿಮಾ ಜರ್ನಿಯ ಅನುಭವ ಹಂಚಿಕೊಂಡರು. ಚಿತ್ರರಂಗ ಅಂದ್ರೆ ಏನು? ಸಿನಿಮಾ ಹಿಂದಿನ ಶ್ರಮ, ಸಿನಿಮಾ ಉದ್ದೇಶ ಏನಾಗಿರಬೇಕು ಎಂಬ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ಕೊಟ್ಟರು.
ಟೆಂಟ್ ಸಿನಿಮಾ ಕಾರ್ಯಗಾರದಲ್ಲಿ ರವಿಚಂದ್ರನ್ ಭಾಗವಹಿಸಿದ್ದ ಫೋಟೋಗಳನ್ನು ಸ್ವತಃ ನಾಗತಿಹಳ್ಳಿ ಚಂದ್ರಶೇಖರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಧನ್ಯವಾದ ತಿಳಿಸಿದ್ದಾರೆ. ''ಅವರು ಜೀವನ ಎಂಬ ವಿಶ್ವವಿದ್ಯಾಲಯದಲ್ಲಿ ಅದ್ಭುತ ಶಿಕ್ಷಕರು. ತಮ್ಮ ಸಿನಿ ಪಯಣದ ಸಹಜ ಮತ್ತು ಆಳವಾದ ಅನುಭವದ ಮಾತುಗಳಿಂದ ಹೃದಯಗಳನ್ನು ಮುಟ್ಟಿದರು. ನನಗೆ ಮತ್ತು ನಮ್ಮ ಟೆಂಟ್ ಸಿನಿಮಾ ವಿದ್ಯಾರ್ಥಿಗಳಿಗೆ ಭಾನುವಾರವನ್ನು ಅತ್ಯಂತ ವಿಶೇಷವಾಗಿರಿಸಿದರು. ರವಿಚಂದ್ರನ್ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು'' ಎಂದು ನಾಗತಿಹಳ್ಳಿ ಟ್ವಿಟ್ಟರ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಚಿತ್ರೀಕರಣ ಮುಗಿಸಿದ 'ದೃಶ್ಯ 2': ರಾಜೇಂದ್ರ ಪೊನ್ನಪ್ಪ ಹೇಳಿದ್ದೇನು?
ರವಿಚಂದ್ರನ್ ಸಿನಿಮಾಗಳು
ಪಿ ವಾಸು ನಿರ್ದೇಶನದಲ್ಲಿ ದೃಶ್ಯ 2 ಸಿನಿಮಾದ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಮಲಯಾಳಂ ಹಿಟ್ ಚಿತ್ರ 'ದೃಶ್ಯಂ-2' ಕನ್ನಡ ರಿಮೇಕ್ ಇದಾಗಿದ್ದು, ಶೀಘ್ರದಲ್ಲಿ ತೆರೆಗೆ ಬರಲಿದೆ. ಗಿರಿರಾಜ್ ನಿರ್ದೇಶನದಲ್ಲಿ 'ಕನ್ನಡಿಗ' ಚಿತ್ರವೂ ಶೂಟಿಂಗ್ ಮುಗಿಸಿ ಬಿಡುಗಡೆಯಾಗಲು ತಯಾರಾಗುತ್ತಿದೆ. ರವಿಚಂದ್ರನ್ ನಿರ್ದೇಶಿಸಿ, ನಟಿಸಿರುವ ಸಿನಿಮಾ 'ರಾಜೇಂದ್ರ ಪೊನ್ನಪ್ಪ' ರಿಲೀಸ್ ಆಗಬೇಕಿದೆ.
ಇನ್ನು 'ಇಂಡಿಯಾ vs ಇಂಗ್ಲೆಂಡ್' ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಕೊನೆಯ ಸಿನಿಮಾ. 2020ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ವಸಿಷ್ಠ ಸಿಂಹ, ಮಾನ್ವಿತಾ ಕಾಮತ್, ಅನಂತ್ ನಾಗ್, ಸುಮಲತಾ, ಪ್ರಕಾಶ್ ಬೆಳವಾಡಿ, ಸಾಧುಕೋಕಿಲಾ ಸೇರಿದಂತೆ ಹಲವರು ನಟಿಸಿದ್ದರು.