'ಕನ್ನಡಿಗ' ಸಿನಿಮಾ ಬಳಿಕ ಮತ್ತೆ ನಿರ್ದೇಶನಕ್ಕೆ ಸಜ್ಜಾದ ರವಿ ಚಂದ್ರನ್

ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಕನ್ನಡಿಗ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಕನ್ನಡಿಗ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿರುವ ರವಿಚಂದ್ರನ್, ಸದ್ಯ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಕನ್ನಡಿಗ ಸಿನಿಮಾ ಮುಗಿಯುತ್ತಿದ್ದಂತೆ ರವಿಚಂದ್ರನ್ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಹೌದು ರವಿಚಂದ್ರನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ ಎನ್ನಲಾಗುತ್ತಿದೆ. ರವಿಚಂದ್ರನ್ ನಿರ್ದೇಶನದ ರಾಜೇಂದ್ರ ಪೊನ್ನಪ್ಪ ಸಿನಿಮಾ ಇನ್ನು ರಿಲೀಸ್ ಆಗಿಲ್ಲ. ಈ ನಡುವೆ ರವಿಚಂದ್ರನ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಮೂಲಗಳ ಪ್ರಕಾರ ರವಿಚಂದ್ರನ್ ರಾಜಕೀಯ ಕಥಾಹಂದರ ಹೊಂದಿರುವ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ. ಈ ಸಿನಿಮಾಗೆ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳುವ ಜೊತೆಗೆ ನಟನೆ ಸಹ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Ravichandran to Direct and Act political drama after Kannadiga movie

ಚಿತ್ರಕ್ಕೆ ಎನ್ ಎಸ್ ರಾಜ್ ಕುಮಾರ್ ಬಂಡವಾಳ ಹೂಡಲಿದ್ದಾರಂತೆ. ಈಗಾಗಲೇ ಕನ್ನಡಿಗ ಸಿನಿಮಾಗೆ ಬಂಡವಾಳ ಹೂಡಿರುವ ಎನ್ ಎಸ್ ರಾಜ್ ಕುಮಾರ್ ಮತ್ತೆ ರವಿಚಂದ್ರನ್ ಜೊತೆ ಕೈಜೋಡಿಸುತ್ತಿದ್ದಾರೆ. ಎನ್ ಎಸ್ ರಾಜ್ ಕುಮಾರ್ ಈ ಹಿಂದೆ ಪೃಥ್ವಿ, ಜಟ್ಟಾ, ಮೈನಾ, ಮೈತ್ರಿ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.

ರವಿಚಂದ್ರನ್ ಸದ್ಯ ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿದ್ದು, ಬಹುತೇಕ ಕಥೆಯ ಕೆಲಸ ಮುಗಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತವಾಗಿ ಸಿನಿಮಾ ಅನೌನ್ಸ್ ಮಾಡುವ ಸಾಧ್ಯತೆ ಇದೆ. ರವಿಚಂದ್ರನ್ ನಿರ್ದೇಶನದ ರಾಜಕೀಯ ಹಿನ್ನಲೆ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

Recommended Video

ಬಾಕ್ಸರ್ ಮುಂದೆ ಘರ್ಜಿಸಲಿದ್ದಾರೆ ಉಪೇಂದ್ರ | Filmibeat Kannada

More from Filmibeat

English summary
Kannada Actor Ravichandran to Direct and Act political drama after Kannadiga movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X