Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಮ್ಮ ಹೆಸರು ಕೂಡ ನೆನಪಿರೊಲ್ಲ, ಹಾಗೆ ಆಗ್ತೀರಿ: ಎಚ್ಚರಿಕೆ ನೀಡಿದ ಕ್ರೇಜಿಸ್ಟಾರ್ ರವಿಚಂದ್ರನ್
ಕೊರೊನಾ ವೈರಸ್ ವಿರುದ್ಧ ಹೋರಾಟ ತೀವ್ರವಾಗಿ ನಡೆಯುತ್ತಿದೆ. ವೈದ್ಯರು, ನರ್ಸ್ಗಳು, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಅಧಿಕಾರಿಗಳು ತಮ್ಮ ಆರೋಗ್ಯ, ಕುಟುಂಬವನ್ನು ಲೆಕ್ಕಿಸದೆ ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಲಾಕ್ಡೌನ್ನಲ್ಲಿ ಮನೆಯಲ್ಲಿಯೇ ಇರಿ ಸಾಕು ಎಂದು ಎಷ್ಟೇ ಕೇಳಿಕೊಂಡರೂ, ಶಿಕ್ಷಿಸಿದರೂ ಜನ ಮಾತ್ರ ಕಿವಿಗೊಡುತ್ತಿಲ್ಲ. ಲಾಕ್ಡೌನ್ ಉಲ್ಲಂಘಿಸಿ ಪದೇ ಪದೇ ಮನೆಯಿಂದ ಹೊರಬರುತ್ತಿದ್ದಾರೆ. ತಮ್ಮ ಈ ತಪ್ಪು ತಮ್ಮನ್ನು, ತಮ್ಮ ಕುಟುಂಬ ಹಾಗೂ ಸಮುದಾಯವನ್ನು ಬಲಿತೆಗೆದುಕೊಳ್ಳುತ್ತದೆ ಎಂಬ ಅರಿವೂ ಆಗುತ್ತಿಲ್ಲ.
Recommended Video
ಅನೇಕ ಸೆಲೆಬ್ರಿಟಿಗಳು ಮನೆಯಲ್ಲಿಯೇ ಇರುವುದು ಏಕೆ ಮುಖ್ಯ ಎಂಬುದನ್ನು ವಿವರಿಸುತ್ತಿದ್ದಾರೆ. ಸಿನಿಮಾ ನಟರಿಂದ ಬಂದ ಮಾತನ್ನಾದರೂ ಅವರ ಅಭಿಮಾನಿಗಳು ಪಾಲಿಸುತ್ತಾರೆ ಎನ್ನುವುದು ಅಧಿಕಾರಿಗಳ ಆಶಯ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಾವು ಏನು ಮಾಡಬೇಕು? ನಮ್ಮ ಜವಾಬ್ದಾರಿಗಳೇನು ಎಂದು ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ವಿವರಿಸಿದ್ದಾರೆ. ಬೆಂಗಳೂರು ಸಿಟಿ ಪೊಲೀಸರ ಸಹಯೋಗದಲ್ಲಿ ಸಿದ್ಧಪಡಿಸಿರುವ ವಿಡಿಯೋದಲ್ಲಿ 'ಮಲ್ಲ' ಏನು ಹೇಳಿದ್ದಾರೆ? ಮುಂದೆ ಓದಿ.
ಡಾ. ರಾಜಕುಮಾರ್ ಆಗ ಹೇಳಿದ್ದ ಮಾತುಗಳು ಈಗಲೂ ಪ್ರಸ್ತುತ, ನೋಡಿ...
ದೇವರು ಇಲ್ಲ ಎಂದಲ್ಲ...
ಕೊರೊನಾಗೆ ಬೆಂಕಿ ಹಚ್ಚಬೇಕು ಎಂದರೆ ನಿಮ್ಮನೆ ದೀಪ ಆರಬಾರದು ಎಂದರೆ ನೀವಷ್ಟೂ ಜನ ಮನೆಯಲ್ಲಿರಬೇಕು. ದೇವಸ್ಥಾನಗಳೆಲ್ಲವೂ ಮುಚ್ಚಿದೆ. ಅಂದರೆ ದೇವರು ಇಲ್ಲ ಅಂತಾನಾ? ಡಾಕ್ಟರ್ಸ್ಗಳಲ್ಲಿ, ನರ್ಸ್ಗಳಲ್ಲಿ, ಪೊಲೀಸರಲ್ಲಿ ಪ್ರತಿಯಬ್ಬರೂ ಸೇವೆ ಮಾಡುತ್ತಿರುವವರಲ್ಲಿ ಆ ದೇವರು ಇದ್ದಾನೆ. ಆ ದೇವರ ಮೇಲೆ ನಿಮಗೆ ನಂಬಿಕೆ ಇದ್ದರೆ ನೀವು ಮಾಡಬೇಕಿರುವುದು ಇಷ್ಟೇ.
ಅವರ ಋಣ ತೀರಿಸಲಾಗೊಲ್ಲ
ಅವರಷ್ಟೂ ಜನರಕ್ಕೆ ಒಂದು ಸಲ್ಯೂಟ್, ನಮಸ್ಕಾರ, ಒಂದು ಫ್ಲೈಯಿಂಗ್ ಕಿಸ್ ಕೊಡಿ. ಅವರ ಋಣವನ್ನು ನಾವು ಯಾವತ್ತೂ ತೀರಿಸಲು ಆಗೊಲ್ಲ. ಎಷ್ಟು ಜನ್ಮವೆತ್ತಿದರೂ ತೀರಿಸಲು ಆಗೊಲ್ಲ. ಅದನ್ನು ತೀರಿಸಬೇಕು ಅಂತ ನಿಮಗೆ ಇದ್ದರೆ ನೀವು ಮನೆಯಲ್ಲಿ ಇರಿ. ಅವರನ್ನು ಕೊರೊನಾ ಜತೆ ಹೋರಾಡಲು ಬಿಡಿ. ನಿಮ್ಮ ಜತೆ ಹೋರಾಡುವುದಲ್ಲ ಅವರ ಕೆಲಸ.
ಸಂಕಷ್ಟದಲ್ಲಿರುವ ಬಡಜನರಿಗೆ ಆಹಾರ ಸಾಮಗ್ರಿ ಹಂಚಿದ ಸಾಧು ಕೋಕಿಲ
ಕೊರೊನಾಗೆ ಅತಿಥಿಯಾಗಬಾರದು
ಕೊರೊನಾಗೆ ತಿಥಿ ಮಾಡಬೇಕು ಎಂದರೆ ನೀವು ಕೊರೊನಾಗೆ ಅತಿಥಿಯಾಗಬಾರದು. ಮನುಷ್ಯನಿಗೆ ಕಷ್ಟ ಬಂದಾಗಲೇ ಅದನ್ನು ಅವನು ಹೇಗೆ ನಿಭಾಯಿಸುತ್ತಾನೆ ಅನ್ನೋದರ ಮೇಲೆ ಅವರ ವ್ಯಕ್ತಿ ವ್ಯಕ್ತಿತ್ವ ಗೊತ್ತಾಗೋದು. ಅಂತಹ ಒಂದು ಪರೀಕ್ಷೆ ನಮ್ಮೆಲ್ಲರಿಗೂ ಬಂದಿದೆ. ಪರೀಕ್ಷೆಯನ್ನು ಪಾಸು ಮಾಡಬೇಕು ಎಂದರೆ ನೀವೆಲ್ಲರೂ ಮನೆಯಲ್ಲಿ ಇರಬೇಕು.
ಸಿನಿಮಾ ಕಟೌಟ್ ಕಲಾವಿದರ ಮುರಿದ ಬದುಕಿಗೆ ಹೆಗಲು ನೀಡಿದ ಪವರ್ ಸ್ಟಾರ್
|
ನಿಮ್ಮ ಹೆಸರು ಪೇಷೆಂಟ್ ನಂಬರ್ ಆಗುತ್ತದೆ
ಸೋಷಿಯಲ್ ಡಿಸ್ಟೆನ್ಸ್ ಫಾಲೋ ಮಾಡಬೇಕು. ಫೇಲ್ ಆಗಬೇಕು ಎಂದರೆ ನಿಮ್ಮಿಷ್ಟ. ನೀವು ಮನೆಯಿಂದ ಹೊರಬನ್ನಿ. ನಿಮಗೆ ನಿಮ್ಮ ಹೆಸರು ಕೂಡ ನೆನಪಿರೊಲ್ಲ. ಏಕೆಂದರೆ ಅದೊಂದು ಪೇಷೆಂಟ್ ನಂಬರ್ ಆಗಿಬಿಡುತ್ತದೆ. ನೀವು ಪೇಷೆಂಟ್ ಆಗಲು ಬಯಸಿದ್ದೀರಾ ಅಥವಾ ಮನೆಯಲ್ಲಿ ಪೇಷೆನ್ಸ್ನಿಂದ ಇರಲು ಬಯಸಿದ್ದೀರಾ?
ಮತ್ತೊಮ್ಮೆ ನನ್ನ ಕಡೆಯಿಂದ ಸಲ್ಯೂಟ್
ಮತ್ತೊಮ್ಮೆ ಡಾಕ್ಟರ್ಗಳಿಗೆ, ನರ್ಸ್ಗಳಿಗೆ, ಪೊಲೀಸರಿಗೆ, ಅವರ ಕುಟುಂಬದವರಿಗೆ, ಸರ್ಕಾರದವರಿಗೆ ಸೇವೆ ಮಾಡುತ್ತಿರುವ ಪ್ರತಿಯೊಬ್ಬರಿಗೂ ನಮ್ಮ ಕಡೆಯಿಂದೊಂದು ಸಲ್ಯೂಟ್ ಎಂದು ರವಿಚಂದ್ರನ್ ಹೇಳಿದ್ದಾರೆ. ಈ ವಿಡಿಯೋದಲ್ಲಿ ಅವರ ಮಕ್ಕಳಾದ ಮನೋರಂಜನ್ ಮತ್ತು ವಿಕ್ರಂ ಕೂಡ ಕಾಣಿಸಿಕೊಂಡಿದ್ದಾರೆ.