Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ದೇಣಿಗೆ ನೀಡಿದ ರೆಮೋ ನಿರ್ಮಾಪಕ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕಾಮಗಾರಿ ಶುರುವಾಗಿದೆ. ಐತಿಹಾಸಿಕ ರಾಮಮಂದಿರ ನಿರ್ಮಿಸಲು ದೇಶಾದ್ಯಂತ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಜನವರಿ 15 ರಿಂದ ಫೆಬ್ರವರಿ 27ರವರೆಗೂ ವಿಶ್ವ ಹಿಂದೂ ಪರಿಷತ್ ದೇಣಿಗೆ ಸಂಗ್ರಹಿಸುತ್ತಿದೆ.
ರಾಮಮಂದಿರ ನಿರ್ಮಾಣಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕ ಹಾಗೂ ವಿಧಾನಪರಿಷತ್ ಸದಸ್ಯ ಸಿಆರ್ ಮನೋಹರ್ 5 ಲಕ್ಷ ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ನಿರ್ದೇಶಕ ಪವನ್ ಒಡೆಯರ್ ತಮ್ಮ ಫೇಸ್ಬುಕ್ ಹಾಗೂ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ
''ರಾಮಮಂದಿರ ನಿರ್ಮಾಣಕ್ಕಾಗಿ "ರೇಮೊ" ಚಿತ್ರದ ನಿರ್ಮಾಪಕರಾದ ಸಿಆರ್ ಮನೋಹರ್ ಸರ್ 5ಲಕ್ಷ ನೀಡಿದ ಸಂದರ್ಭ. ಸರ್ವೇ ಜನ ಸುಖಿನೋ ಭವಂತು'' ಎಂದು ಒಡೆಯರ್ ಪೋಸ್ಟ್ ಹಾಕಿದ್ದಾರೆ.
ಈ ಹಿಂದೆ ಸ್ಯಾಂಡಲ್ವುಡ್ನಿಂದ ಹಲವು ಸೆಲೆಬ್ರಿಟಿಗಳು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ 1.5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ದೇಣಿಗೆ ನೀಡಿದ ರಸೀದಿಯನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 1 ಲಕ್ಷ ನೆರವು ನೀಡಿದ ಪ್ರಣಿತಾ ಸುಭಾಷ್
ಅದಕ್ಕೂ ಮುಂಚೆ ನಟಿ ಪ್ರಣಿತಾ ಸುಭಾಷ್ ಸಹ ಒಂದು ಲಕ್ಷ ರೂಪಾಯಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
Recommended Video
ಅಂದ್ಹಾಗೆ, ಸಿಆರ್ ಮನೋಹರ್ ಅವರು ಸದ್ಯ ರೆಮೋ ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇಶಾನ್ ನಟನೆಯ ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ.