Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ದೇಣಿಗೆ ನೀಡಿದ ರೆಮೋ ನಿರ್ಮಾಪಕ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕಾಮಗಾರಿ ಶುರುವಾಗಿದೆ. ಐತಿಹಾಸಿಕ ರಾಮಮಂದಿರ ನಿರ್ಮಿಸಲು ದೇಶಾದ್ಯಂತ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಜನವರಿ 15 ರಿಂದ ಫೆಬ್ರವರಿ 27ರವರೆಗೂ ವಿಶ್ವ ಹಿಂದೂ ಪರಿಷತ್ ದೇಣಿಗೆ ಸಂಗ್ರಹಿಸುತ್ತಿದೆ.
ರಾಮಮಂದಿರ ನಿರ್ಮಾಣಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕ ಹಾಗೂ ವಿಧಾನಪರಿಷತ್ ಸದಸ್ಯ ಸಿಆರ್ ಮನೋಹರ್ 5 ಲಕ್ಷ ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ನಿರ್ದೇಶಕ ಪವನ್ ಒಡೆಯರ್ ತಮ್ಮ ಫೇಸ್ಬುಕ್ ಹಾಗೂ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ
''ರಾಮಮಂದಿರ ನಿರ್ಮಾಣಕ್ಕಾಗಿ "ರೇಮೊ" ಚಿತ್ರದ ನಿರ್ಮಾಪಕರಾದ ಸಿಆರ್ ಮನೋಹರ್ ಸರ್ 5ಲಕ್ಷ ನೀಡಿದ ಸಂದರ್ಭ. ಸರ್ವೇ ಜನ ಸುಖಿನೋ ಭವಂತು'' ಎಂದು ಒಡೆಯರ್ ಪೋಸ್ಟ್ ಹಾಕಿದ್ದಾರೆ.
ಈ ಹಿಂದೆ ಸ್ಯಾಂಡಲ್ವುಡ್ನಿಂದ ಹಲವು ಸೆಲೆಬ್ರಿಟಿಗಳು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ 1.5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ದೇಣಿಗೆ ನೀಡಿದ ರಸೀದಿಯನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 1 ಲಕ್ಷ ನೆರವು ನೀಡಿದ ಪ್ರಣಿತಾ ಸುಭಾಷ್
ಅದಕ್ಕೂ ಮುಂಚೆ ನಟಿ ಪ್ರಣಿತಾ ಸುಭಾಷ್ ಸಹ ಒಂದು ಲಕ್ಷ ರೂಪಾಯಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
Recommended Video
ಅಂದ್ಹಾಗೆ, ಸಿಆರ್ ಮನೋಹರ್ ಅವರು ಸದ್ಯ ರೆಮೋ ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇಶಾನ್ ನಟನೆಯ ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ.