Don't Miss!
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- News ಚಾಮರಾಜನಗರ ಜಿಲ್ಲೆಯ ಹಲವು ಗ್ರಾಮಗಳ ಜನರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ-ಇವರ ಬೇಡಿಕೆ ಏನು ಗೊತ್ತಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಾನೂ ಒಂದು ಹೆಣ್ಣುಮಗುವಿನ ತಂದೆ': ನೆಟ್ಟಿಗರ ಟೀಕೆಗೆ ಉಪೇಂದ್ರ ಬೇಸರ
Recommended Video
ಇಡೀ ದೇಶವನ್ನೆ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಪಶು ವೈದ್ಯೆ ರೇಪ್ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಸುಟ್ಟು ಬಿಸಾಡಿದ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಒಂದಿಷ್ಟು ಪ್ರಶ್ನೆಗಳನ್ನು ಎತ್ತಿದ್ದರು. ಉಪೇಂದ್ರ ರಿಯಾಲಿಟಿ ಚೆಕ್ ಗೆ ಹೊರಟಿರುವುದರ ವಿರುದ್ಧ ನೆಟ್ಟಿಗರು ರೊಚ್ಚಿಗೆದ್ದಿದ್ದರು.
ಇಡೀ ದೇಶವೆ ಪೊಲೀಸರ ಕಾರ್ಯವೈಕರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದರೆ, ರಿಯಲ್ ಸ್ಟಾರ್ ರಿಯಾಲಿಟಿ ಚೆಕ್ ಗೆ ಹೊರಟಿದ್ದಾರೆ ಎಂದು ಉಪ್ಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಉಪೇಂದ್ರ ಅವನ್ನು ಸರಿಯಾಗೆ ತರಾಟೆಗೆ ತೆಗೆದುಕೊಂಡಿದ್ದರು.
ಅತ್ಯಾಚಾರಿಗಳ ಎನ್ ಕೌಂಟರ್: ಉಪೇಂದ್ರ ಟ್ವೀಟ್ ವಿರುದ್ಧ ನೆಟ್ಟಿಗರ ಆಕ್ರೋಶ
ಸದ್ಯ ಈ ಬಗ್ಗೆ ಉಪೇಂದ್ರ ಮತ್ತೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಒಂದು ಹೆಣ್ಣುಮಗುವಿನ ತಂದೆ. ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹ್ಯೇಯ ಮನಸಿನ ಜನ ಈ ಸಮಾಜದಲ್ಲಿ ಇದ್ದಾರಲ್ಲಾ ಎಂದು ನೋವಾಗುತ್ತಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ "ಎನ್ ಕೌಂಟರ್ ಗಳು ಪ್ರಭಾವಿಗಳಿಂದ ದುರುಪಯೋಗವಾಗಬಾರದು, ನ್ಯಾಯಾಂಗ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಬೇಕು ಎಂಬುದಷ್ಟೇ ನನ್ನ ಉದ್ದೇಶವಾಗಿತ್ತು. ನಾನೂ ಒಂದು ಹೆಣ್ಣು ಮಗುವಿನ ತಂದೆ, ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹ್ಯೇಯ ಮನಸಿನ ಜನ ಈ ಸಮಾಜದಲ್ಲಿ( ಕೆಲವರು ನನ್ನ ಜೊತೆಗೇ ) ಇದ್ದಾರಲ್ಲ ಎಂದು ನೋವಾಗುತ್ತಿದೆ. ಎಂದು ಹೇಳಿದ್ದಾರೆ.
ಎನ್ ಕೌಂಟರ್ ಬಗ್ಗೆ ಉಪೇಂದ್ರ ಹೇಳಿದ್ದೇನು?
"ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟು ಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯೊ? ಈ ರೀತಿಯ ಎನ್ ಕೌಂಟರ್ ಪ್ರಮುಖ ವ್ಯಕ್ತಿಗಳ ಕೇಸ್ನಲ್ಲಿ ಯಾಕಾಗುವುದಿಲ್ಲ? ಕೋರ್ಟನಲ್ಲಿ ವಿಚಾರಣೆಗೂ ಮುನ್ನ ನಡೆದ ಈ ಎನ್ಕೌಂಟರ್ ಇನ್ನು ಮುಂದೆ ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ?" ಎಂದು ಪ್ರಶ್ನಿಸಿದ್ದರು. ಉಪೇಂದ್ರ ಟ್ವೀಟ್ ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.