Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೆಬೆಲ್ ಸ್ಟಾರ್ ಅಂಬರೀಶ್ ಕಂಡೀಷನ್ ಈಗ ಹೇಗಿದೆ?
ನಟ, ವಸತಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ (61) ಅವರು ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಅವರ ಅಪಾರ ಅಭಿಮಾನಿ ಬಳಗ ಆತಂಕಕ್ಕೀಡಾಗಿದೆ.
ಇದೀಗ ಬಂದ ವರದಿ ಪ್ರಕಾರ, ಅಂಬರೀಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರು ಆರೋಗ್ಯದಿಂದಿದ್ದಾರೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ. ಇಂದು ಮುಂಜಾನೆ ನಟ ದರ್ಶನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಂಬರೀಶ್ ಅವರ ಆರೋಗ್ಯವನ್ನು ವಿಚಾರಿಸಿದರು. ಒಂದು ಗಂಟೆಗೂ ಅಧಿಕ ಕಾಲ ಅವರು ಆಸ್ಪತ್ರೆಯಲ್ಲೇ ಕಳೆದರು. [ಪೈಸಾಗಾಗಿ ಚಿತ್ರ ಮಾಡುತ್ತಿರುವ ಸುಮಲತಾ ಅಂಬರೀಶ್]
ಅಂಬರೀಶ್ ಆರೋಗ್ಯವಾಗಿದ್ದಾರೆ, ಮಾತನಾಡುತ್ತಿದ್ದಾರೆ, ಆಸ್ಪತ್ರೆ ಬಳಿ ಯಾರೂ ಬರಬೇಡಿ ಎಂದು ಅಭಿಮಾನಿಗಳಿಗೆ ಆರೋಗ್ಯ ಸಚಿವ ಯುಟಿ ಖಾದರ್ ಹಾಗೂ ವಿಕ್ರಂ ಆಸ್ಪತ್ರೆ ವೈದ್ಯರು ಮನವಿ ಮಾಡಿದ್ದರೂ ಲೆಕ್ಕಿಸದೆ ರಾಜ್ಯದ ಮೂಲೆ ಮೂಲೆಗಳಿಂದ ವಿಕ್ರಂ ಆಸ್ಪತ್ರೆ ಬಳಿಕ ಅಂಬರೀಶ್ ಅಭಿಮಾನಿಗಳು ಹರಿದುಬರುತ್ತಿದ್ದಾರೆ.
ವಿಕ್ರಂ ಆಸ್ಪತ್ರೆಗೆ ನಟ ದುನಿಯಾ ವಿಜಯ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ನಾಣಯ್ಯ, ಯುಟಿ ಖಾದರ್ ಖಾನ್ ಭೇಟಿ ನೀಡಿದ್ದಾರೆ. ಮಂಡ್ಯದ ಗಂಡು, ಕಲಿಯುಗ ಕರ್ಣ ಅಂಬರೀಶ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ, ಅವರು ಬೇಗ ಗುಣಮುಖರಾಗಲಿ. (ಒನ್ಇಂಡಿಯಾ ಕನ್ನಡ)