Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಗಪುರದಲ್ಲೂ ಅಸ್ತಿತ್ವ ಉಳಿಸಿಕೊಂಡ ಅಂಬಿ ಮೀಸೆ
ಆಸರಿಲ್ಲದ ಮನೆ, ಮೀಸೆ ಇಲ್ಲದ ಮೋರೆ ಎರಡೂ ನೋಡಲು ಚೆನ್ನಾಗಿರಲಿಲ್ಲ. ಇನ್ನು ರೆಬೆಲ್ ಸ್ಟಾರ್ ಅಂಬರೀಶ್ ಅವರ ವಿಚಾರಕ್ಕೆ ಬಂದರೆ ಮೀಸೆಗೆ ಕೊಟ್ಟಷ್ಟು ಇಂಪಾರ್ಟೆನ್ಸ್ ಇನ್ಯಾವುದಕ್ಕೂ ಅಷ್ಟಾಗಿ ಕೊಡಲ್ಲ, ತೆರೆಯ ಮೇಲೆ. ಇದೀಗ ಅವರು ಸಿಂಗಪುರದ ಮೌಂಟ್ ಎಲಿಜೆಬತ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದೀಗ ಅವರ ಆರೋಗ್ಯ ಸಹಜ ಸ್ಥಿತಿಗೆ ಮರಳಿದ್ದು ಸಿಂಗಪುರದಲ್ಲೇ ಇನ್ನೂ ಸ್ವಲ್ಪ ಸಮಯ ಇದ್ದು ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸ್ವಲ್ಪ ಸುಸ್ತಾದಂತೆ ಕಂಡರೂ ಅವರ ಮೀಸೆ ಮಾತ್ರ ಹೇಗಿತ್ತೋ ಹಾಗೆಯೇ ಇದೆ. ಅಂಬರೀಶ ಚಿತ್ರಕ್ಕಾಗಿ ಈ ಮೀಸೆಯನ್ನು ಅವರು ಹುರಿಗೊಳಿಸಿದ್ದರು. [ನಟ ಅಂಬರೀಶ್ ಆರೋಗ್ಯದ ಬಗ್ಗೆ ಮುಚ್ಚಿಟ್ಟ ಸತ್ಯಗಳು]
ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಇರುವಷ್ಟು ದಿನವೂ ಅವರಿಗೆ ಸಿಂಗಪುರದಲ್ಲಿರುವ ಅರ್ಜುನ್ ಸರ್ಜಾ ಮಗಳ ಮನೆಯಿಂದ ಊಟ ಕಳುಹಿಸಲಾಗುತ್ತಿತ್ತು. ಬೆಳಗ್ಗೆ ಇಡ್ಲಿ ಸಾಂಬಾರ್, ಉಪ್ಪಿಟ್ಟು, ಪೊಂಗಲ್, ಬಿಸಿಬೇಳೆಬಾತ್, ಅಕ್ಕಿರೊಟ್ಟಿ ಸರಬರಾಜಾಗುತ್ತಿತ್ತು.
ದೇವರ ದಯೆಯಿಂದ ಪುನರ್ಜನ್ಮ ಸಿಕ್ಕಿದೆ. ಅಭಿಮಾನಿಗಳ ಪ್ರಾರ್ಥನೆಯಿಂದ ತಾಯ್ನಾಡಲ್ಲಿ ಜೀವನ ನಡೆಸುವ ಅವಕಾಶ ಸಿಕ್ಕಿದೆ. ನಿಮ್ಮ ಪ್ರೀತಿ ಅಭಿಮಾನ ಪೂಜೆ ಪುನಸ್ಕಾರದಿಂದ ಹೊಸ ಚೈತನ್ಯ ಬಂದಿದೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದಾರೆ ಅಂಬರೀಶ್. ಇದೀಗ ಅವರು ಸಿಂಗಪುರದ ಸ್ನೇಹಿತರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.