Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಶ ಚಿತ್ರದಲ್ಲಿ ರೆಬೆಲ್ ಸ್ಟಾರ್ ಪಾತ್ರ ಬಹಿರಂಗ
ರೆಬೆಲ್ ಸ್ಟಾರ್ ಅಂಬರೀಶ್ ಅವರು ಶಾರ್ಟ್ ಬ್ರೇಕ್ ನ ಬಳಿಕ ಮತ್ತೆ ಬಣ್ಣ ಹಚ್ಚಿಕೊಳ್ಳಲು ಅಣಿಯಾಗಿದ್ದಾರೆ. ಶ್ವಾಸಕೋಶದ ಸೋಂಕಿಗೆ ಒಳಗಾಗಿ ಸಿಂಗಪುರದಲಿ ಚಿಕಿತ್ಸೆ ಪಡೆದುಬಂದಿರುವ ಅವರು ಈಗ ಫರ್ಫೆಕ್ಟ್ ಲಿ ಆಲ್ ರೈಟ್.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿರುವ ಅಂಬರೀಶ್ ಚಿತ್ರದಲ್ಲಿನ ಅವರ ಪಾತ್ರ ಬಹಿರಂಗವಾಗಿದೆ. ಈ ಚಿತ್ರದಲ್ಲಿ ಅಂಬಿ ಅವರದು ಬೆಂಗಳೂರು ನಿರ್ಮಾಪಕ ಕೆಂಪೇಗೌಡನ ಪಾತ್ರದಲ್ಲಿ ಝಗಮಗಿಸಲಿದ್ದಾರೆ.
ಈ ಹಿಂದೆ ಅವರು ಕಲ್ಲರಳಿ ಹೂವಾಗಿ ಚಿತ್ರದಲ್ಲಿ ಮದಕರಿ ನಾಯಕನ ಪಾತ್ರ ಪೋಷಿಸಿದ್ದರು. ಈಗ ಮತ್ತೊಮ್ಮೆ ಕೃಷ್ಣದೇವರಾಯನ ಸಾಮಂತ ರಾಜನಾಗಿ ತೆರೆಯ ಮೇಲೆ ಕತ್ತಿ ಝಳಪಿಸಲಿದ್ದಾರೆ. ಸುಖಧರೆ ಪಿಕ್ಚರ್ಸ್ ಲಾಂಛನದಡಿಯಲ್ಲಿ ಮಹೇಶ್ ಸುಖಧರೆ ನಿರ್ಮಿಸಿ ನಿರ್ದೇಶಿಸುತ್ತಿರುವ ಚಿತ್ರವಿದು.
ಚಿತ್ರಕ್ಕೆ ಕಥೆ, ಸಂಭಾಷಣೆ ಚಿಂತನ್, ಛಾಯಾಗ್ರಹಣ ಸತ್ಯ, ಸಂಗೀತ ಹರಿಕೃಷ್ಣ, ಕಲೆ ಈಶ್ವರಿ ಕುಮಾರ್, ಸಾಹಸ ರವಿವರ್ಮ, ನೃತ್ಯ ಮುರುಳಿ, ಗಣೇಶ್, ಕಲೈ, ಸಂಕಲನ ಪ್ರಕಾಶ್, ನಿರ್ಮಾಣ ಮೇಲ್ವಿಚಾರಣೆ ಮೋಹನ್, ನಿರ್ಮಾಣ ನಿರ್ವಹಣೆ ಅನಿಲ್ಕುಮಾರ್, ಚಿತ್ರದ ಸಹ ನಿರ್ಮಾಪಕರು ಮಹೇಶ್ ನಂಜಯ್ಯ, ಎಂ.ಸುರೇಶ್.
ತಾರಾಗಣದಲ್ಲಿ ದರ್ಶನ್, ಪ್ರಿಯಾಮಣಿ, ಡಾ.ಅಂಬರೀಶ್, ಸುಮಲತಾ, ಉಮಾಶ್ರೀ, ನಿಶಾ ಯೋಗೀಶ್ವರ್, ಸಾಧು ಕೋಕಿಲ, ಶರತ್ ಲೋಹಿತಾಶ್ವ, ಬುಲೆಟ್ ಪ್ರಕಾಶ್, ರವಿಶಂಕರ್, ರಾಜೇಂದ್ರ ಕಾರಂತ್, ಸಿದ್ಧಾರ್ಥ (ಬಾಂಬೆ), ಬಿರಾದಾರ್, ರೋಹಿತ್, ಭರತ್, ಸತೀಶ್, ಬೆಸ್ಟ್ಕ್ಲಬ್ ಆರ್. ಅರುಣಾಚಲಂ, ಜಯರಾಂ, ಚೇತನ, ಲೋಕಿ, ಉದಯ್, ಚೇತನ್ ಮುಂತಾದವರಿದ್ದಾರೆ. (ಏಜೆನ್ಸೀಸ್)