Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೈರಾ ನರಸಿಂಹ ರೆಡ್ಡಿ' ಗೆ ಕಂದಾಯ ಅಧಿಕಾರಿಗಳಿಂದ ಶಾಕ್
ಬಹುನಿರೀಕ್ಷಿತ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಭಾರಿ ಬಜೆಟ್ ನ 'ಸೈರಾ ನರಸಿಂಹ ರೆಡ್ಡಿ' ಚಿತ್ರತಂಡಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿತ್ರದ ಚಿತ್ರಿಕರಣಕ್ಕೆ ಹಾಕಲಾಗಿದ್ದ ದೊಡ್ಡ ಸೆಟ್ ಅನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.
'ಸೈರಾ' ಚಿತ್ರಕ್ಕಾಗಿ ನಾಯಕನ ಮನೆಯನ್ನು ನಿರ್ಮಿಸಲಾಗಿತ್ತು. ಈಗ ಅದೇ ಮನೆಯನ್ನು ಅಧಿಕಾರಿಗಳು ಕೆಡವಿದ್ದಾರೆ. ರಾಮ್ ಚರಣ್ ಅಭಿನಯದ ಸೂಪರ್ ಹಿಟ್ 'ರಂಗಸ್ಥಳಂ' ಚಿತ್ರಕ್ಕೂ ಇದೇ ಸ್ಥಳದಲ್ಲಿ ಸೆಟ್ ಹಾಕಲಾಗಿತ್ತು. 'ಸೈರಾ ನರಸಿಂಹ ರೆಡ್ಡಿ' ಚಿತ್ರವನ್ನು ಮೆಗಾ ಸ್ಟಾರ್ ಚಿರಂಜೀವಿಯವರ ಹೋಂ ಬ್ಯಾನರ್ ನಲ್ಲಿ ನಿರ್ಮಾಣವಾಗುತಿದ್ದು, ಅವರ ಪುತ್ರ ರಾಮ್ ಚರಣ್ ಈ ಚಿತ್ರಕ್ಕೆ ಬಂಡವಾಳವನ್ನ ಹಾಕಿದ್ದಾರೆ.
ಸೈರಾ' ಸೆಟ್ ನಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್
ಸೇರಿಲಿಂಗಂಪಲ್ಲಿಯಲ್ಲಿ ಚಿತ್ರಕ್ಕಾಗಿ ಸೆಟ್ ಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿತ್ತು. ಸರ್ಕಾರಿ ಭೂಮಿಯಲ್ಲಿ ಅನುಮತಿ ಇಲ್ಲದೆ ಸೆಟ್ ನಿರ್ಮಾಣ ಮಾಡಿರುವುದಕ್ಕೆ ಕಂದಾಯ ಅಧಿಕಾರಿಗಳು ಸೆಟ್ ಅನ್ನು ಕೆಡವಿದ್ದಾರೆ. ಈ ಸ್ಥಳದಿಂದ ಸೆಟ್ ಅನ್ನು ಸ್ಥಳಾಂತರಿಸಲು ಹಲವು ಬಾರಿ ಚಿತ್ರತಂಡಕ್ಕೆ ಸೂಚನೆಗಳನ್ನು ನೀಡಲಾಗಿದ್ದರೂ, ಯಾವುದೇ ಪ್ರಯೋಜನ ಆಗಿಲ್ಲ.
ಇದು ಭೂ ಸ್ವಾಧೀನಕ್ಕೆ ಚಿತ್ರತಂಡ ಹಾಕಿದ್ದ ಪೂರ್ವ ಯೋಜಿತ ಪ್ಲಾನ್ ಎಂದು ಆದಾಯ ಅಧಿಕಾರಿಗಳು ಸಂಶಯವನ್ನ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರತಂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.