Don't Miss!
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- News Air India: ಹಾರಾಟ ನಿಲ್ಲಿಸಿದ ಆಕಾಶದ ರಾಣಿ: ಐಶಾರಾಮಿ ವಿಮಾನದ ಬಗ್ಗೆ ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರಿಪ್ಪರ್’
'ಬಣ್ಣದ ಕೊಡೆ' ಅನ್ನುವ ಕಲಾತ್ಮಕ ಚಿತ್ರದ ನಂತರ ನಿರ್ದೇಶಕ ಕೃಷ್ಣ ಬೆಳ್ತಂಗಡಿ 'ರಿಪ್ಪರ್' ಎನ್ನುವ ಎರಡನೇ ಚಿತ್ರವನ್ನು ಆರಂಭಿಸಿದ್ದಾರೆ. ರಿಪ್ಪರ್ ಸತ್ಯ ಘಟನಾ ಆಧಾರಿತ ಚಿತ್ರವಾಗಿದ್ದು ಈಗಿನ ಕಾಲಘಟ್ಟಕ್ಕೆ ಅನುಗುಣವಾಗಿ ಬದಲಾವಣೆ ಮಾಡಿಕೊಳ್ಳಲಾಗಿದ್ಯಂತೆ.
ಜಿ.ಕೆ ರಿಯಲ್ ಇಮೇಜಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ರಿಪ್ಪರ್ ಚಿತ್ರತಂಡ ಸದ್ದಿಲ್ಲದೆ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿದೆ. ಫಸ್ಟ್ ಶೆಡ್ಯೂಲ್ ನಲ್ಲಿ ಹತ್ತು ದಿನಗಳ ಕಾಲ ಆಗುಂಬೆಯ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ.
'ಫಸ್ಟ್ ಹಾಫ್'ನಲ್ಲಿ ಶಿವಣ್ಣ ಕಿಂಗ್: ಸೆಂಚುರಿ ಸ್ಟಾರ್ ನ ಯಾರೂ ಮುಟ್ಟೋಕೆ ಆಗಲಿಲ್ಲ.!
ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು ಹೋದ ಖಳನಾಯಕನನ್ನು ಪೊಲೀಸರು ಹುಡುಕಾಡುವುದು, ಖಳನಾಯಕನ ಪತ್ನಿಯ ರೋಷ, ನಾಯಕನಾಯಕಿಯ ಭಾವನಾತ್ಮಕ ಸನ್ನಿವೇಶಗಳ ದೃಶ್ಯಗಳನ್ನು ಚಿತ್ರೀಕರಿಸಲಾಯಿತು. ಖಳನಾಯಕನ ದೃಶ್ಯ ಹೊರತುಪಡಸಿ, ಉಳಿದಂತೆ ಹಲವು ದೃಶ್ಯಗಳ ಚಿತ್ರೀಕರಣ ಮುಗಿದಿದೆ.
ಖಳನಾಯಕರ ಪತ್ನಿ ಪಾತ್ರದಲ್ಲಿ ಅಮುಲ್ ಗೌಡ, ಇನ್ಸ್ ಪೆಕ್ಟರ್ ಪಾತ್ರದಲ್ಲಿ ಚಕ್ರವರ್ತಿ ಚಂದ್ರಚೂಡ್, ನಾಯಕ ಶ್ರೀರಾಮ್, ನಾಯಕಿ ಶ್ರೀಮಯ್ಯ ಅಭಿನಯ ಮಾಡಿದ್ದಾರೆ. ಕೃಷ್ಣ ಬೆಳ್ತಂಗಡಿ ನಿರ್ದೇಶನ ಚಿತ್ರಕ್ಕಿದ್ದು, ಅನಿಲ್ ಕುಮಾರ್ ಛಾಯಾಗ್ರಹಣ, ಹಿತನ್ ಹಾಸನ್ ಸಂಗೀತ ಚಿತ್ರಕ್ಕಿದೆ.