Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮ್ಮ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಿದ ರಿಷಭ್ ಶೆಟ್ಟಿ
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾವನ್ನು ನೋಡಿ ನಿರ್ದೇಶಕ ರಿಷಭ್ ಶೆಟ್ಟಿಗೆ ಅಭಿಮಾನಿಯೊಬ್ಬರು ಪತ್ರ ಬರೆದಿದ್ದರು. ಈ ಅಭಿಮಾನಿಯನ್ನು ರಿಷಭ್ ಶೆಟ್ಟಿ ನಿನ್ನೆ (ಫೆಬ್ರವರಿ 2) ಭೇಟಿ ಮಾಡಿದ್ದಾರೆ.
Recommended Video
ಕೆಲಸ ಮೇಲೆ ರಿಷಭ್ ಶೆಟ್ಟಿ ಮೈಸೂರಿಗೆ ಹೋಗಿದ್ದರು. ಈ ವೇಳೆ ತಮ್ಮ ಅಪರೂಪದ ಅಭಿಮಾನಿಯನ್ನು ಭೇಟಿ ಮಾಡಿದ್ದಾರೆ. ಸಿನಿಮಾ ನೋಡಿ ಪತ್ರ ಬರೆದ ಅಭಿಮಾನಿಗೆ ಅಭಿನಂದನೆ ಸಲ್ಲಿಸಿದ್ದಾರೆ.
''ಒಂದು ಸಿನಿಮಾವನ್ನು ಸಿನಿಮಾ ಮೀರಿ ಭಾವನೆಯಾಗಿ ತೆಗೆದುಕೊಳ್ಳುವುದು ದೊಡ್ಡದು. ನನಗೆ ಅವರು ಬರೆದಿರುವ ಪತ್ರ ಬೇರೆ ಪ್ರಶಸ್ತಿಗಳಿಗಿಂತ ಹೆಚ್ಚು ಅನಿಸಿತು. ಕನ್ನಡ ಸಿನಿಮಾದ ಅಭಿಮಾನಿಗಳಿಂದ ಕನ್ನಡ ಸಿನಿಮಾ ಉಳಿಯುತ್ತದೆ. ಮುಂದೆ ಬೆಳೆಯುತ್ತದೆ.'' ಎಂದು ರಿಷಭ್ ಸಂತಸ ವ್ಯಕ್ತಪಡಿಸಿದರು.
ಭರತ್ ರಾಮಸ್ವಾಮಿ ಎಂಬುವವರು ಮೈಸೂರಿನ ಅಭಿಮಾನಿ. ಡಿಜಿಟಲ್ ಪ್ಲ್ಯಾಟ್ ಫಾರ್ಮ್ ನಲ್ಲಿ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರವನ್ನು ವೀಕ್ಷಿಸಿದರು. ಸಿನಿಮಾ ನೋಡಿ ಪತ್ರ ಬರೆದು ಅದರ ಜೊತೆಗೆ 200 ರೂಪಾಯಿ ಹಣವನ್ನು ಕಳುಹಿಸಿದ್ದರು. ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡದ ಕಾರಣ ತಮ್ಮ ಟಿಕೆಟ್ ಹಣವನ್ನು ಪತ್ರದ ಜೊತೆಗೆ ಕಳುಹಿಸಿದ್ದರು.
ಅಂದ್ಹಾಗೆ, 2018 ರಲ್ಲಿ ಬಿಡುಗಡೆ ಆಗಿದ್ದ ರಿಷಬ್ ಶೆಟ್ಟಿ ನಿರ್ಮಾಣದ ಮತ್ತು ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ.