Just In
Don't Miss!
- Sports
SMAT: ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ಬರೋಡಾವನ್ನು ಸೆಮಿಫೈನಲ್ಗೇರಿಸಿದ ವಿಷ್ಣು ಸೋಲಂಕಿ
- News
ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ, ಜಾಹೀರಾತು ಬೈಲಾ ತಿದ್ದುಪಡಿ: ಬಿಬಿಎಂಪಿ ಆಯುಕ್ತ
- Automobiles
ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು
- Finance
ಬಜೆಟ್ 2021: ಏನಿದು ಭಾರತದ ಆರ್ಥಿಕ ಸಮೀಕ್ಷೆ? ಈ ವರದಿಗೆ ಏಕಿಷ್ಟು ಮಹತ್ವ?
- Lifestyle
ಕಾಂತಿಯುತ ತ್ವಚೆಗಾಗಿ ಬಾಳೆಹಣ್ಣಿನ ವಿವಿಧ ಫೇಸ್ ಮಾಸ್ಕ್ ಗಳು
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡ್ರೀಮ್ ಕಾರಿನಲ್ಲಿ ದರ್ಶನ್ ಜೊತೆ ರೌಂಡ್ಸ್ ಹಾಕಿದ ರಿಷಬ್ ಶೆಟ್ಟಿ ಹೇಳಿದ್ದೇನು?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇರುವ ಕಾರ್ ಕ್ರೇಜ್ ಬಗ್ಗೆ ಎಲ್ಲರಿಗೂ ಗೊತ್ತಿದೆ. ಡಿ ಬಾಸ್ ಬಳಿ ತರಹೇವಾರಿ ಕಾರುಗಳಿವೆ. ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿಗೆ ಇಷ್ಟವಾದ ಕಾರಿನಲ್ಲಿ ದರ್ಶನ್ ಮೈಸೂರು ರೌಂಡ್ಸ್ ಹಾಕಿಸಿದ್ದಾರೆ. ದರ್ಶನ್ ಜೊತೆ ರೌಂಡ್ಸ್ ಹಾಕಿದ ಸಂತಸವನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಡ್ರೀಮ್ ಕಾರು ಫೋರ್ಡ್ ಮಸ್ಟಾಂಗ್ ಜಿಟಿ ಕಾರಿನಲ್ಲಿ ದರ್ಶನ್ ಜೊತೆ ಕುಳಿತು ಮೈಸೂರು ಓಡಾಡಿದ್ದಾರೆ. ದರ್ಶನ್ ಜೊತೆ ಕಾರಿನಲ್ಲಿ ಕುಳಿತಿರುವ ಫೋಟೋವನ್ನು ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ. ಇಬ್ಬರ ಕಾರ್ ಡ್ರೈವಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಂದೆ ಓದಿ..
2ನೇ ಹಂತದ ಚಿತ್ರೀಕರಣಕ್ಕೆ ಸಜ್ಜಾದ 'ರಾಜವೀರ ಮದಕರಿ ನಾಯಕ'; ಲೊಕೇಶನ್ ಹುಡುಕಾಟದಲ್ಲಿ ಚಿತ್ರತಂಡ

ಡ್ರೀಮ್ ಕಾರಿನಲ್ಲಿ ದರ್ಶನ್ ಜೊತೆ ರಿಷಬ್ ಶೆಟ್ಟಿ ರೌಂಡ್ಸ್
ಈ ಬಗ್ಗೆ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಖುಷಿ ಪಟ್ಟಿದ್ದಾರೆ. 'ನನ್ನ ಡ್ರೀಮ್ ಕಾರ್ FordMustang. ನಿನ್ನೆ ಸಂಜೆ ದರ್ಶನ್ ಸರ್ ತಮ್ಮ MustangGT ನಲ್ಲಿ ಒಂದು ಡ್ರೈವ್ ಕರೆದುಕೊಂಡು ಹೋದಾಗ ಆದ ಖುಷಿ ಅಷ್ಟಿಷ್ಟಲ್ಲ. ಧನ್ಯವಾದಗಳು ದರ್ಶನ್ ಸರ್. ಅದ್ಭುತವಾದ ಸಮಯ' ಎಂದು ಬರೆದುಕೊಂಡಿದ್ದಾರೆ.

ಅಭಿಮಾನಿಗಳ ಮೆಚ್ಚುಗೆ
ರಿಷಬ್ ಶೆಟ್ಟಿಯನ್ನು ಭೇಟಿಯಾಗುತ್ತಿದ್ದಂತೆ ಇಬ್ಬರು ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಅಲ್ಲದೆ ಅಭಿಮಾನಿಗಳು ಇಬ್ಬರು ಒಟ್ಟಿಗೆ ಚಿತ್ರ ಮಾಡಿ ಎಂದು ಹೇಳುತ್ತಿದ್ದಾರೆ. ರಿಷಬ್ ಪೋಸ್ಟ್ ಗೆ ಇಬ್ಬರು ಒಂದು ಸಿನಿಮಾ ಮಾಡಿ, ಇಬ್ಬರ ಕಾಂಬಿನೇಷನ್ ಅದ್ಭುತವಾಗಿದೆ. ಹೊಸ ಸಿನಿಮಾದ ಬಗ್ಗೆ ಮಾತನಾಡಿರುವ ಹಾಗಿದೆ ಎನ್ನುವ ಕಾಮೆಂಟ್ಸ್ ಹರಿದು ಬರುತ್ತಿದೆ.
ದರ್ಶನ್ 'ರಾಬರ್ಟ್' ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಗೆ ಹೆಚ್ಚಿದ ಬೇಡಿಕೆ

ಮೈಸೂರಿನಲ್ಲಿ ಚಿತ್ರೀಕರಣ
ಅಂದ್ಹಾಗೆ ರಿಷಬ್ ಶೆಟ್ಟಿ ಸದ್ಯ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಚಿತ್ರೀಕರಣ ಸದ್ಯ ಮೈಸೂರಿನಲ್ಲಿ ನಡೆಯುತ್ತಿದೆ. ಇದೇ ಸಿನಿಮಾದ ಚಿತ್ರೀಕರಣ ವೇಳೆ ದರ್ಶನ್, ರಿಷಬ್ ಮತ್ತು ತಂಡವನ್ನು ಭೇಟಿಯಾಗಿದ್ದಾರೆ.

ಬದಲಾದ ನಿರ್ದೇಶಕರು
ಇತ್ತೀಚಿಗಷ್ಟೆ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ದೊಡ್ಡ ಬದಲಾವಣೆ ಆಗಿದ್ದು, ಚಿತ್ರದಿಂದ ನಿರ್ದೇಶಕ ಗಿರಿಕೃಷ್ಣ ಹೊರನಡಿದಿದ್ದಾರೆ. ಅನಾರೋಗ್ಯದ ಕಾರಣ ನಿರ್ದೇಶಕ ಗಿರಿಕೃಷ್ಣ ಸಿನಿಮಾದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಚಿತ್ರಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಇಬ್ಬರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಾಗುತ್ತಿದೆ.