Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರೀಮ್ ಕಾರಿನಲ್ಲಿ ದರ್ಶನ್ ಜೊತೆ ರೌಂಡ್ಸ್ ಹಾಕಿದ ರಿಷಬ್ ಶೆಟ್ಟಿ ಹೇಳಿದ್ದೇನು?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇರುವ ಕಾರ್ ಕ್ರೇಜ್ ಬಗ್ಗೆ ಎಲ್ಲರಿಗೂ ಗೊತ್ತಿದೆ. ಡಿ ಬಾಸ್ ಬಳಿ ತರಹೇವಾರಿ ಕಾರುಗಳಿವೆ. ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿಗೆ ಇಷ್ಟವಾದ ಕಾರಿನಲ್ಲಿ ದರ್ಶನ್ ಮೈಸೂರು ರೌಂಡ್ಸ್ ಹಾಕಿಸಿದ್ದಾರೆ. ದರ್ಶನ್ ಜೊತೆ ರೌಂಡ್ಸ್ ಹಾಕಿದ ಸಂತಸವನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಡ್ರೀಮ್ ಕಾರು ಫೋರ್ಡ್ ಮಸ್ಟಾಂಗ್ ಜಿಟಿ ಕಾರಿನಲ್ಲಿ ದರ್ಶನ್ ಜೊತೆ ಕುಳಿತು ಮೈಸೂರು ಓಡಾಡಿದ್ದಾರೆ. ದರ್ಶನ್ ಜೊತೆ ಕಾರಿನಲ್ಲಿ ಕುಳಿತಿರುವ ಫೋಟೋವನ್ನು ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ. ಇಬ್ಬರ ಕಾರ್ ಡ್ರೈವಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಂದೆ ಓದಿ..
2ನೇ ಹಂತದ ಚಿತ್ರೀಕರಣಕ್ಕೆ ಸಜ್ಜಾದ 'ರಾಜವೀರ ಮದಕರಿ ನಾಯಕ'; ಲೊಕೇಶನ್ ಹುಡುಕಾಟದಲ್ಲಿ ಚಿತ್ರತಂಡ
ಡ್ರೀಮ್ ಕಾರಿನಲ್ಲಿ ದರ್ಶನ್ ಜೊತೆ ರಿಷಬ್ ಶೆಟ್ಟಿ ರೌಂಡ್ಸ್
ಈ ಬಗ್ಗೆ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಖುಷಿ ಪಟ್ಟಿದ್ದಾರೆ. 'ನನ್ನ ಡ್ರೀಮ್ ಕಾರ್ FordMustang. ನಿನ್ನೆ ಸಂಜೆ ದರ್ಶನ್ ಸರ್ ತಮ್ಮ MustangGT ನಲ್ಲಿ ಒಂದು ಡ್ರೈವ್ ಕರೆದುಕೊಂಡು ಹೋದಾಗ ಆದ ಖುಷಿ ಅಷ್ಟಿಷ್ಟಲ್ಲ. ಧನ್ಯವಾದಗಳು ದರ್ಶನ್ ಸರ್. ಅದ್ಭುತವಾದ ಸಮಯ' ಎಂದು ಬರೆದುಕೊಂಡಿದ್ದಾರೆ.
ಅಭಿಮಾನಿಗಳ ಮೆಚ್ಚುಗೆ
ರಿಷಬ್ ಶೆಟ್ಟಿಯನ್ನು ಭೇಟಿಯಾಗುತ್ತಿದ್ದಂತೆ ಇಬ್ಬರು ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಅಲ್ಲದೆ ಅಭಿಮಾನಿಗಳು ಇಬ್ಬರು ಒಟ್ಟಿಗೆ ಚಿತ್ರ ಮಾಡಿ ಎಂದು ಹೇಳುತ್ತಿದ್ದಾರೆ. ರಿಷಬ್ ಪೋಸ್ಟ್ ಗೆ ಇಬ್ಬರು ಒಂದು ಸಿನಿಮಾ ಮಾಡಿ, ಇಬ್ಬರ ಕಾಂಬಿನೇಷನ್ ಅದ್ಭುತವಾಗಿದೆ. ಹೊಸ ಸಿನಿಮಾದ ಬಗ್ಗೆ ಮಾತನಾಡಿರುವ ಹಾಗಿದೆ ಎನ್ನುವ ಕಾಮೆಂಟ್ಸ್ ಹರಿದು ಬರುತ್ತಿದೆ.
ದರ್ಶನ್ 'ರಾಬರ್ಟ್' ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಗೆ ಹೆಚ್ಚಿದ ಬೇಡಿಕೆ
ಮೈಸೂರಿನಲ್ಲಿ ಚಿತ್ರೀಕರಣ
ಅಂದ್ಹಾಗೆ ರಿಷಬ್ ಶೆಟ್ಟಿ ಸದ್ಯ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಚಿತ್ರೀಕರಣ ಸದ್ಯ ಮೈಸೂರಿನಲ್ಲಿ ನಡೆಯುತ್ತಿದೆ. ಇದೇ ಸಿನಿಮಾದ ಚಿತ್ರೀಕರಣ ವೇಳೆ ದರ್ಶನ್, ರಿಷಬ್ ಮತ್ತು ತಂಡವನ್ನು ಭೇಟಿಯಾಗಿದ್ದಾರೆ.
Recommended Video
ಬದಲಾದ ನಿರ್ದೇಶಕರು
ಇತ್ತೀಚಿಗಷ್ಟೆ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ದೊಡ್ಡ ಬದಲಾವಣೆ ಆಗಿದ್ದು, ಚಿತ್ರದಿಂದ ನಿರ್ದೇಶಕ ಗಿರಿಕೃಷ್ಣ ಹೊರನಡಿದಿದ್ದಾರೆ. ಅನಾರೋಗ್ಯದ ಕಾರಣ ನಿರ್ದೇಶಕ ಗಿರಿಕೃಷ್ಣ ಸಿನಿಮಾದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಚಿತ್ರಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಇಬ್ಬರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಾಗುತ್ತಿದೆ.