Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಪ್ರಯೋಗಕ್ಕೆ ಮುಂದಾದ ಕನ್ನಡದ ಈ ನಟನನ್ನು ಗುರುತಿಸಿ
Recommended Video
ಯಾವುದೇ ಒಂದು ಸಿನಿಮಾ ಆಗಲಿ ಅದಕ್ಕೆ ಪೋಸ್ಟರ್ ಬಹಳ ಮುಖ್ಯ. ಚಿತ್ರದ ಫಸ್ಟ್ ಲುಕ್ ಮೂಲಕವೇ ಪ್ರೇಕ್ಷಕರಿಗೆ ಆ ಸಿನಿಮಾದ ಮೇಲೆ ನಿರೀಕ್ಷೆ ಹುಟ್ಟುತ್ತದೆ. ಅದೇ ರೀತಿ ಈಗ ಕನ್ನಡದಲ್ಲಿ ರಿಲೀಸ್ ಆಗಿರುವ ಒಂದು ಚಿತ್ರದ ಲುಕ್ ಸಖತ್ ಸುದ್ದಿ ಮಾಡುತ್ತಿದೆ.
ಅಂದಹಾಗೆ, ಇದು 'ಕಥಾ ಸಂಗಮ' ಚಿತ್ರದ ಫಸ್ಟ್ ಲುಕ್. ಈ ಚಿತ್ರದಲ್ಲಿ ನಟ ನಿರ್ದೇಶಕ ರಿಷಬ್ ಶೆಟ್ಟಿ ಒಂದು ವಿಭಿನ್ನ ಪಾತ್ರ ಮಾಡುತ್ತಿದ್ದಾರೆ. ಸದ್ಯ ಅವರ ಲುಕ್ ಬಿಡುಗಡೆಯಾಗಿದ್ದು, ಇದು ರಿಷಬ್ ಶೆಟ್ಟಿ ಅವರ ಅಂತ ನಂಬುವುದಕ್ಕೆ ಆಗದಿರುವ ಮಟ್ಟಿಗೆ ವಿಭಿನ್ನವಾಗಿ ಅವರನ್ನು ಇಲ್ಲಿ ತೋರಿಸಲಾಗಿದೆ. 'ಕಥಾ ಸಂಗಮ' 7 ಕಥೆಗಳ ಸಿನಿಮಾವಾಗಿದ್ದು, ಇದು ಅವುಗಳ ಪೈಕಿ ಮೊದಲ ಭಾಗವಾಗಿದೆ. ಮುಂದೆ ಓದಿ...
ಬಿಕ್ಷುಕನ ಪಾತ್ರ
'ಕಿರಿಕ್ ಪಾರ್ಟಿ' ಚಿತ್ರವನ್ನು ನಿರ್ದೇಶನ ಮಾಡಿದ್ದ ರಿಷಬ್ ಶೆಟ್ಟಿ ಈಗ ನಟನೆಗೆ ಮರಳಿದ್ದಾರೆ. ರಿಷಬ್ 'ಕಥಾ ಸಂಗಮ' ಚಿತ್ರದಲ್ಲಿ ಬಿಕ್ಷುಕನ ಪಾತ್ರ ಮಾಡುತ್ತಿದ್ದು, ಅವರ ಲುಕ್ ಈಗ ಎಲ್ಲರ ಗಮನ ಸೆಳೆದಿದೆ.
ಬಾಂಬೆಯ ಮೇಕಪ್ ಕಲಾವಿದ
ಜಿಭಾ ಶರೀಭ್ ಎಂಬ ಬಾಂಬೆಯ ಮೇಕಪ್ ಕಲಾವಿದರೊಬ್ಬರು ಸತತ ಒಂದು ದಿನ ಪೂರ್ತಿ ಸಮಯ ತೆಗೆದುಕೊಂಡು ರಿಷಬ್ ಶೆಟ್ಟಿ ಅವರಿಗೆ ಈ ಮೇಕಪ್ ಮಾಡಿದ್ದಾರಂತೆ.
ಹರಿಪ್ರಿಯಾ ನಾಯಕಿ
ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ನಟಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಅಂದರೆ ಈ ಹಿಂದೆ ಹರಿಪ್ರಿಯಾ ಅವರಿಗೆ 'ರಿಕ್ಕಿ' ಚಿತ್ರವನ್ನು ರಿಷಬ್ ನಿರ್ದೇಶನ ಮಾಡಿದ್ದರು.
ಒಂದೇ ಲೊಕೇಷನ್
'ಕಥಾ ಸಂಗಮ' ಸಿನಿಮಾದ ಈ ಭಾಗ ಒಂದೇ ಲೊಕೇಷನ್ ನಲ್ಲಿ ನಡೆಯಲಿದೆ. ವಿಶೇಷ ಅಂದರೆ ಇದೊಂದು ಸೈಲೆಂಟ್ ಸಿನಿಮಾವಾಗಿದೆ. ರಿಷಬ್ ಶೆಟ್ಟಿ ಮತ್ತು ಹರಿಪ್ರಿಯಾ ಜೊತೆಗೆ ರುಮಿ ಎಂಬ ಬೀದಿ ನಾಯಿ ಚಿತ್ರದ ಪ್ರಮುಖ ಪಾತ್ರದಲ್ಲಿ ಇದೆ.
ಕಿರಣ್ ರಾಜ್ ನಿರ್ದೇಶಕ
'ಕಥಾ ಸಂಗಮ' ಚಿತ್ರವನ್ನು ಕಿರಣ್ ರಾಜ್ ಎಂಬುವವರು ನಿರ್ದೇಶನ ಮಾಡಿದ್ದಾರೆ. ಪ್ರಕಾಶ್, ಪ್ರದೀಪ್ ಮತ್ತು ರಿಷಬ್ ಶೆಟ್ಟಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.