Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಬರಹಗಾರರ ಹುಡುಕಾಟದಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ
ಒಂದು ಸಿನಿಮಾದ ಆತ್ಮ ಇರುವುದು ಕಥೆಯಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಬೇಕು ಅಂದರೆ, ಮೊದಲು ಒಂದು ಒಳ್ಳೆಯ ಕಥೆ ಬೇಕು. ಹೀಗಿದ್ದರೂ, ಕನ್ನಡ ಇಂಡಸ್ಟ್ರಿಯಲ್ಲಿ ಬರಹಗಾರರಿಗೆ ಬೆಲೆ ನೀಡುವುದಿಲ್ಲ ಎಂಬ ಆರೋಪ ಇದ್ದೇ ಇದೆ.
ಆದರೆ, ಇಂದಿನ ದಿನದಲ್ಲಿ ಒಳ್ಳೆ ಒಳ್ಳೆಯ ಕಥೆಯ ಸಿನಿಮಾಗಳು ಗೆಲ್ಲುತ್ತಿದೆ. ಅನೇಕ ಸಿನಿಮಾಗಳಲ್ಲಿ ಕಥೆಯೇ ಸ್ಟಾರ್ ಆಗಿದೆ. ಆ ಕಾರಣ ರೈಟರ್ ಗಳಿಗೆ ಸಹ ಹೀಗಿಗಾ ಒಳ್ಳೆಯ ಅವಕಾಶಗಳು ಸಿಗುತ್ತಿದೆ.
ನಿರ್ದೇಶಕ, ನಟ, ನಿರ್ಮಾಪಕ ರಿಷಬ್ ಶೆಟ್ಟಿ ಈಗ ಬರಹಗಾರರಿಗೆ ಒಂದು ಒಳ್ಳೆಯ ಅವಕಾಶ ನೀಡಿದ್ದಾರೆ. ಮೂರು ಪ್ರಶ್ನೆಗಳನ್ನು ನೀಡಿದ್ದು, ಅದಕ್ಕೆ ಸರಿಯಾದ ಉತ್ತರ ಬರೆದು ಕಳುಹಿಸಿದವರಿಗೆ ತಮ್ಮ ಮುಂದಿನ ಸಿನಿಮಾದಲ್ಲಿ ಅವಕಾಶ ನೀಡಲಿದ್ದಾರೆ.
ಅಂತ್ಯಸಂಸ್ಕಾರದ ಸಮಯದಲ್ಲಿ ನಡೆಯಬಹುದಾದ ಹಾಸ್ಯ ಸನ್ನಿವೇಶವೊಂದನ್ನು ಸಂಭಾಷಣೆ ಸಹಿತ ದೃಶ್ಯವಾಗಿ ಬರೆಯುವುದು, ಕ್ಯಾರೆಕ್ಟರ್ ಸ್ಕೆಚ್ ಬರೆಯುವುದು, ಹಾಗೂ ಕಿರಿಕ್ ಪಾರ್ಟಿ ಸಿನಿಮಾ ಗ್ಯಾಂಗ್ ಸ್ಟರ್ ಶೈಲಿಯ ಚಿತ್ರವಾಗಿದ್ದರೆ, ಅದರ ಕಥೆಯ ಏಳೆಯನ್ನು ಬರೆದು ಕಳುಹಿಸಬೇಕಾಗಿದೆ.
ಈ ಮೂರು ಪ್ರಶ್ನೆಗಳಿಗೆ ಕೆಲವು ನಿಯಮಗಳು ಇದು ಅವನ್ನು ಒಂದು ಪೋಸ್ಟರ್ ಮೂಲಕ ತಿಳಿಸಲಾಗಿದೆ. ಇದಕ್ಕೆ ಮೇ 23 ರವರೆಗೆ ಸಮಯಾವಕಾಶ ನೀಡಲಾಗಿದೆ. ನಿಮ್ಮ ಬರಹವನ್ನು [email protected] ಈ ಮೇಲ್ ವಿಳಾಸಕ್ಕೆ ಕಳುಹಿಸಬಹಬೇಕಾಗಿದೆ.