Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಬರಹಗಾರರ ಹುಡುಕಾಟದಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ
ಒಂದು ಸಿನಿಮಾದ ಆತ್ಮ ಇರುವುದು ಕಥೆಯಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಬೇಕು ಅಂದರೆ, ಮೊದಲು ಒಂದು ಒಳ್ಳೆಯ ಕಥೆ ಬೇಕು. ಹೀಗಿದ್ದರೂ, ಕನ್ನಡ ಇಂಡಸ್ಟ್ರಿಯಲ್ಲಿ ಬರಹಗಾರರಿಗೆ ಬೆಲೆ ನೀಡುವುದಿಲ್ಲ ಎಂಬ ಆರೋಪ ಇದ್ದೇ ಇದೆ.
ಆದರೆ, ಇಂದಿನ ದಿನದಲ್ಲಿ ಒಳ್ಳೆ ಒಳ್ಳೆಯ ಕಥೆಯ ಸಿನಿಮಾಗಳು ಗೆಲ್ಲುತ್ತಿದೆ. ಅನೇಕ ಸಿನಿಮಾಗಳಲ್ಲಿ ಕಥೆಯೇ ಸ್ಟಾರ್ ಆಗಿದೆ. ಆ ಕಾರಣ ರೈಟರ್ ಗಳಿಗೆ ಸಹ ಹೀಗಿಗಾ ಒಳ್ಳೆಯ ಅವಕಾಶಗಳು ಸಿಗುತ್ತಿದೆ.
ನಿರ್ದೇಶಕ, ನಟ, ನಿರ್ಮಾಪಕ ರಿಷಬ್ ಶೆಟ್ಟಿ ಈಗ ಬರಹಗಾರರಿಗೆ ಒಂದು ಒಳ್ಳೆಯ ಅವಕಾಶ ನೀಡಿದ್ದಾರೆ. ಮೂರು ಪ್ರಶ್ನೆಗಳನ್ನು ನೀಡಿದ್ದು, ಅದಕ್ಕೆ ಸರಿಯಾದ ಉತ್ತರ ಬರೆದು ಕಳುಹಿಸಿದವರಿಗೆ ತಮ್ಮ ಮುಂದಿನ ಸಿನಿಮಾದಲ್ಲಿ ಅವಕಾಶ ನೀಡಲಿದ್ದಾರೆ.
ಅಂತ್ಯಸಂಸ್ಕಾರದ ಸಮಯದಲ್ಲಿ ನಡೆಯಬಹುದಾದ ಹಾಸ್ಯ ಸನ್ನಿವೇಶವೊಂದನ್ನು ಸಂಭಾಷಣೆ ಸಹಿತ ದೃಶ್ಯವಾಗಿ ಬರೆಯುವುದು, ಕ್ಯಾರೆಕ್ಟರ್ ಸ್ಕೆಚ್ ಬರೆಯುವುದು, ಹಾಗೂ ಕಿರಿಕ್ ಪಾರ್ಟಿ ಸಿನಿಮಾ ಗ್ಯಾಂಗ್ ಸ್ಟರ್ ಶೈಲಿಯ ಚಿತ್ರವಾಗಿದ್ದರೆ, ಅದರ ಕಥೆಯ ಏಳೆಯನ್ನು ಬರೆದು ಕಳುಹಿಸಬೇಕಾಗಿದೆ.
ಈ ಮೂರು ಪ್ರಶ್ನೆಗಳಿಗೆ ಕೆಲವು ನಿಯಮಗಳು ಇದು ಅವನ್ನು ಒಂದು ಪೋಸ್ಟರ್ ಮೂಲಕ ತಿಳಿಸಲಾಗಿದೆ. ಇದಕ್ಕೆ ಮೇ 23 ರವರೆಗೆ ಸಮಯಾವಕಾಶ ನೀಡಲಾಗಿದೆ. ನಿಮ್ಮ ಬರಹವನ್ನು [email protected] ಈ ಮೇಲ್ ವಿಳಾಸಕ್ಕೆ ಕಳುಹಿಸಬಹಬೇಕಾಗಿದೆ.