Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಕ್ಷಿತ್ ಸಿನಿಮಾ ಅಂದ್ಮೇಲೆ ನಾನು ಇರಲೇ ಬೇಕು ಅದು ನನ್ನ ಅಧಿಕಾರ': ರಿಷಬ್ ಶೆಟ್ಟಿ
Recommended Video
ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಚಿತ್ರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ಟ್ರೈಲರ್ ನಲ್ಲಿ ರಿಷಬ್ ಪಾತ್ರ ಬಯಲಾಗಿದೆ. ರಕ್ಷಿತ್ ಮತ್ತು ರಿಷಬ್ ಇಬ್ಬರು ಉತ್ತಮ ಸ್ನೇಹಿತರು. ಒಟ್ಟಿಗೆ ಚಿತ್ರರಂಗಕ್ಕೆ ಬಂದವರು.
ಜೊತೆಜೊತೆಯಲ್ಲಿ ಸಿನಿಮಾ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಸದ್ಯ ರಕ್ಷಿತ್ ಶೆಟ್ಟಿ ಅಭಿನಯದ ಬುಹುನಿರೀಕ್ಷೆಯ 'ಅವನೇ ಶ್ರೀಮನ್ನಾರಾಯಣ' ಚಿತ್ರದಲ್ಲಿ ರಿಷಬ್ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ರಿಲೀಸ್ ಸಮಾರಂಭದಲ್ಲಿ ಮಾತನಾಡಿದ ರಿಷಬ್ "ರಕ್ಷಿತ್ ಸಿನಿಮಾ ಅಂದ್ಮೇಲೆ ನಾನು ಇರಲೇ ಬೇಕು ಅದು ನನ್ನ ಅಧಿಕಾರ" ಎಂದು ಹೇಳಿದ್ದಾರೆ.
ಬಾಲಿವುಡ್ ನಲ್ಲಿ ಈ ರೀತಿ ಕಿತಾಪತಿಗಳು ಬಹಳ ಆಗ್ತಿವೆ- ರಿಷಭ್ ಬೇಸರ
ಅಂದ್ಹಾಗೆ ರಿಷಬ್ ಇಲ್ಲಿ ಕೌವ್ ಬಾಯ್ ಕೃಷ್ಣ ಪಾತ್ರದಲ್ಲಿ ರಿಷಬ್ ಮಿಂಚಿದ್ದಾರೆ. ಅವನೇ ಶ್ರೀಮನ್ನಾರಾಯಣ ಚಿತ್ರ ಪ್ಯಾನ್ ಇಂಡಿಯ ಸಿನಿಮಾವಲ್ಲ ಇದು ಯೂನಿವರ್ಸಲ್ ಸಿನಿಮಾ ಎಂದು ಹೇಳಿದ್ದಾರೆ. ಈ ಚಿತ್ರದಲ್ಲಿ ಅಭಿನಯಸಬೇಕು ಎಂದು ರಿಷಬ್ ರಕ್ಷಿತ್ ಹಿಂದೆ ಬಿದ್ದಿದಂತೆ.
ಮಚ್ಚಾ ನನಗೂ ಒಂದು ಪಾತ್ರ ಕೊಡು ಅಂತ ಹಿಂದೆ ಬಿದ್ದದ್ದೆ ಎಂದು ರಿಷಬ್ ಹೇಳಿದ್ದಾರೆ. ಇನ್ನು ರಕ್ಷಿತ್ ಮುಂದಿನ ಸಿನಿಮಾ 'ಪುಣ್ಯಕೋಟಿ'ಯಲ್ಲೂ ಒಂದು ಪಾತ್ರ ಕೊಡುವಂತೆ ಕೇಳಿಕೊಂಡಿದ್ದಾರೆ. ಯಾವುದೆ ಸಮಯದಲ್ಲಾದರು ಬಂದು ಚಿತ್ರೀಕರಣ ಮಾಡುತ್ತೇನೆ ಎಂದು ಹೇಳಿ ತಮಾಷೆ ಮಾಡಿದರು.