Don't Miss!
- News Lok Sabha Election: ಚಾಮರಾಜನಗರ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯ ಕಣ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ರಿಷಿಗೆ ಜೋಡಿಯಾದ 'ಕನ್ನಡತಿ' ರಂಜನಿ ರಾಘವನ್
ಕನ್ನಡತಿ ಧಾರಾವಾಹಿ ಮೂಲಕ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ನಟಿ ರಂಜನಿ ರಾಘವನ್ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ದೂದ್ ಪೇಡ ದಿಗಂತ್ ಜೊತೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದ ರಂಜನಿ ಇದೀಗ ಮತ್ತೊಂದು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು, ರಂಜನಿ ರಾಘವನ್ ಇದೀಗ ಸ್ಯಾಂಡಲ್ ವುಡ್ ನಟ ರಿಷಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿಶೇಷ ಎಂದರೆ ಚಿತ್ರಕ್ಕೆ ಬೆಲ್ ಬಾಟಂ ನಿರ್ದೇಶಕ ಜಯತೀರ್ಥ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭ ಮಾಡಿರುವ ಜಯತೀರ್ಥ ಚಿತ್ರದ ಮೇಕಿಂಗ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಒಂದು ಸಿನಿಮಾಗಾಗಿ ಒಂದಾಗುತ್ತಿರುವ ಕನ್ನಡದ ಐದು ನಿರ್ದೇಶಕರು
ಅಂದಹಾಗೆ ಜಯತೀರ್ಥ ಆಕ್ಷನ್ ಕಟ್ ಹೇಳುತ್ತಿರುವುದು 5 ನಿರ್ದೇಶಕರು ಒಟ್ಟಿಗೆ ಸೇರಿಮಾಡುತ್ತಿರುವ ಸಿನಿಮಾಗೆ. ಜಯತೀರ್ಥ ಸದ್ಯ ತನ್ನ ಭಾಗದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಜಯತೀರ್ಥ ಕಥೆಗೆ ನಾಯಕನಾಗಿ ರಿಷಿ ಮತ್ತು ನಾಯಕಿಯಾಗಿ ರಂಜನಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕಥೆಯಲ್ಲಿ ರಿಷಿ ಸುಧಾಕರ್ ಎನ್ನುವ ಪೋಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇತ್ತೀಚಿಗೆ ಬನಾರಸ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ಜಯತೀರ್ಥ ಆಗಲೆ ಹೊಸ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ಜಯತೀರ್ಥ ಚಿತ್ರೀಕರಣ ಪ್ರಾರಂಭಿಸಿರುವ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ.
Recommended Video
ಒಂದು ಸಿನಿಮಾಗಾಗಿ ಒಟ್ಟಿಗೆ ಸೇರಿರುವ ಪ್ರಸಿದ್ಧ 5 ನಿರ್ದೇಶಕರಲ್ಲಿ ಜಯತೀರ್ಥ ಸೇರಿದಂತೆ ಯೋಗರಾಜ್ ಭಟ್, ಕೆ.ಎಂ ಚೈತನ್ಯ, ಶಶಾಂಕ್ ಮತ್ತು ಪವನ್ ಕುಮಾರ್ ಇದ್ದಾರೆ. ಉಳಿದ ನಿರ್ದೇಶಕರ ಸಿನಿಮಾದ ಬಗ್ಗೆ ಮಾಹಿತಿ ಇನ್ನು ಬಹಿರಂಗವಾಗಿಲ್ಲ. 5 ನಿರ್ದೇಶಕರು ಬೇರೆ ಬೇರೆ ಕಥೆಗಳಿಗೆ ನಿರ್ದೇಶನ ಮಾಡಿದ್ದರೂ ಸಹ ಕಥೆಗೆ ಒಂದೊಂದು ಲಿಂಕ್ ಇರುತ್ತೆ ಎನ್ನಲಾಗುತ್ತಿದೆ. ಕುತೂಹಲ ಮೂಡಿಸಿರುವ 5 ಜನ ನಿರ್ದೇಶಕರ ಈ ಸಿನಿಮಾ ಮುಂದಿನ ವರ್ಷ ತೆರೆಗೆ ಬರಲಿದೆ.