Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರುಣ್ ಸುಧೀರ್ ಗೆ ವಿಶ್ ಮಾಡಿ 'ರಾಬರ್ಟ್' ಸಿನಿಮಾದ ಹೊಸ ಪೋಸ್ಟರ್ ಶೇರ್ ಮಾಡಿದ ದರ್ಶನ್
ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ತಿಂಗಳಲ್ಲೇ ರಾಬರ್ಟ್ ಬಿಡುಗಡೆಯಾಗಬೇಕಿತ್ತು. ಆದ್ರೆ, ಕೊರೊನಾ ಲಾಕ್ಡೌನ್ ನಿಂದ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.
Recommended Video
ಅಕ್ಟೋಬರ್ 15ರ ನಂತರ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದ್ದರೂ, ಸ್ಟಾರ್ ನಟರ ಚಿತ್ರಗಳು ರಿಲೀಸ್ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಬಹಳ ಹೈಪ್ ಕ್ರಿಯೇಟ್ ಮಾಡಿರುವ ರಾಬರ್ಟ್ ಇದೀಗ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್ ನೀಡಿದೆ.
ರಾಬರ್ಟ್ ಟೀಸರ್ 50 ಲಕ್ಷ ವೀಕ್ಷಣೆ: ಧನ್ಯವಾದ ಹೇಳಿದ ನಟ ದರ್ಶನ್
ಹೌದು ಇಂದು ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಬಗ್ಗೆ ಅಕ್ಟೋಬರ್ 8ರಂದು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು. ಇವತ್ತು 10 ಗಂಟೆಗೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ಕುತೂಹಲ ಮೂಡಿಸುವ ಪೋಸ್ಟರ್ ನಲ್ಲಿ ದರ್ಶನ್ ಮೂರು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪೋಸ್ಟರ್ ನಲ್ಲಿ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವುದಾಗಿ ಹೇಳಿದ್ದಾರೆ. ಆದರೆ ರಾಬರ್ಟ್ ಸಿನಿಮಾ ಈ ವರ್ಷ ತೆರೆಗೆ ಬರುವುದು ಅನುಮಾನವಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟ ರ್ ನಲ್ಲಿ ಈ ಪೋಸ್ಟರ್ ಅನ್ನು ಶೇರ್ ಮಾಡಿ "A Brother from another Mother ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ ತರುಣ್ ಸುಧೀರ್, ನಿಮ್ಮ ದಾಸ ದರ್ಶನ್" ಎಂದು ತರಣ್ ಸುಧೀರ್ ಗೆ ವಿಶ್ ಮಾಡಿದ್ದಾರೆ.
ರಾಬರ್ಟ್ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ. ಇನ್ನು ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನಿರ್ದೇಶಿಸಿದ್ದಾರೆ.