Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈ 27 ಕ್ಕೆ ರಾಬರ್ಟ್ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಉಡುಗೊರೆ
ದರ್ಶನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ರಾಬರ್ಟ್ ಸಿನಿಮಾ ಬಿಡುಗಡೆ ಕೊರೊನಾ ಕಾರಣದಿಂದ ಮುಂದಕ್ಕೆ ಹೋಗುತ್ತಲೇ ಇದೆ.
Recommended Video
ಏಪ್ರಿಲ್ 9 ಕ್ಕೆ ರಾಬರ್ಟ್ ಸಿನಿಮಾ ಬಿಡುಗಡೆ ಆಗಬೇಕಿತ್ತು, ಆದರೆ ಕೊರೊನಾ ಕಾರಣದಿಂದ ಮುಂದಕ್ಕೆ ಹೋಗುತ್ತಲೇ ಇದೆ. ಚಿತ್ರವು ಬಿಡುಗಡೆಗೆ ಸರ್ವ ಸನ್ನಧ್ಧವಾಗಿದೆ ಆದರೆ ಚಿತ್ರಮಂದಿರಗಳು ತೆರೆಯುವ ವರೆಗೂ ಕಾಯಲೇಬೇಕು.
ದರ್ಶನ್ ವಿಷಯ ಕೆದಕಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಕಾರ್ಪೊರೇಟರ್
ಆದರೆ ರಾಬರ್ಟ್ ಸಿನಿಮಾದಿಂದ ಅಭಿಮಾನಿಗಳ ಗಮನ ಬೇರೆಡೆ ಹರಿಯದಂತೆ ಆಗಿದ್ದಾಂಗೆ ಸಿನಿಮಾದ ಬಗ್ಗೆ ಏನಾದರೂ ಅಪ್ಡೇಟ್ಗಳನ್ನು ನೀಡುತ್ತಲೇ ಇದೆ ಚಿತ್ರತಂಡ.
ಎರಡು ಹಾಡುಗಳು ಬಿಡುಗಡೆ ಆಗಿವೆ
ಈಗಾಗಲೇ ರಾಬರ್ಟ್ ಸಿನಿಮಾದ ಎರಡು ಹಾಡುಗಳನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಲಾಗಿದೆ. ಎರಡೂ ಹಾಡುಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ರಾಬರ್ಟ್ ಇನ್ಟ್ರೊಡಕ್ಷನ್ ಹಾಡಂತೂ ಸಖತ್ ಮಜವಾಗಿದೆ.
ಎರಡನೇ ಪೋಸ್ಟರ್ ಬಿಡುಗಡೆ ಆಗಲಿದೆ
ಇದೀಗ ರಾಬರ್ಟ್ ಸಿನಿಮಾದ ಎರಡನೇ ಪೋಸ್ಟರ್ ಅನ್ನು ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ. ಜುಲೈ 27 ಕ್ಕೆ ಸಿನಿಮಾದ ಎರಡನೇ ಪೋಸ್ಟರ್ ಬಿಡುಗಡೆ ಆಗಲಿದೆ. ಜುಲೈ 27 ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಹುಟ್ಟುಹಬ್ಬ ಹಾಗಾಗಿ ಅದೇ ದಿನ ಪೋಸ್ಟರ್ ಬಿಡುಗಡೆ ಆಗಲಿದೆ.
ದುಬಾರಿ ಕಾರು ಬಿಟ್ಟು ರೈತ ಮಿತ್ರ ಟ್ರ್ಯಾಕ್ಟರ್ ಓಡಿಸುತ್ತಿರುವ ಡಿ ಬಾಸ್ ದರ್ಶನ್
ರಾಬರ್ಟ್ ಚಿತ್ರದ ಪೋಸ್ಟರ್ಗಳು ಹರಿದಾಡ್ತಿವೆ
ರಾಬರ್ಟ್ ಸಿನಿಮಾದ ಕೆಲವು ಪೋಸ್ಟರ್ಗಳು ಈಗಾಗಲೇ ಹರಿದಾಡುತ್ತಿದ್ದು, ಕಪ್ಪು ಬಣ್ಣದ ಸ್ಟೈಲಿಶ್ ವಸ್ತ್ರ ಧರಿಸಿ ಕೈಯಲ್ಲಿ ಗನ್ ಹಿಡಿದು ನಿಂತಿರುವ ದರ್ಶನ್, ಹಾಗೂ ಇನ್ನೊಂದು ಪೋಸ್ಟರ್ನಲ್ಲಿ ಬೈಕ್ ಮೇಲೆ ಕುಳಿತಿರುವ ಚಿತ್ರಗಳು ಸಖತ್ ವೈರಲ್ ಆಗಿವೆ.
ಕೊರೊನಾ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ
ಆಶಾ ಭಟ್ ನಾಯಕಿ
ರಾಬರ್ಟ್ ಸಿನಿಮಾದಲ್ಲಿ ದರ್ಶನ್ ಜೊತೆಗೆ ಕನ್ನಡತಿ ಆಶಾ ಭಟ್ ಅಭಿನಯಿಸುತ್ತಿದ್ದಾರೆ. ಜೊತೆಗೆ ಪ್ರಭಾಕರ್ ಪುತ್ರ ವಿನೋದ್ ಪ್ರಭಾಕರ್ ಸಹ ಸಿನಿಮಾದಲ್ಲಿದ್ದಾರೆ. ನಿರ್ದೇಶನವನ್ನು ತರುಣ್ ಸುಧೀರ್ ಮಾಡಿದ್ದಾರೆ.