Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದಾದ್ಯಂತ 'ರಾಜಾಹುಲಿ' ಘರ್ಜನೆ ಆರಂಭ
ಕನ್ನಡಿಗರ ಅಭಿರುಚಿಯನ್ನು ಗಮನದಲ್ಲಿಟ್ಟುಕೊಂಡು ತೆರೆಗೆ ತಂದಿರುವ ಚಿತ್ರ ರಾಜಾಹುಲಿ. ಈ ಚಿತ್ರ ತಮಿಳಿನ ಸುಂದರಪಾಂಡ್ಯನ್ ರೀಮೇಕ್ ಆದರೂ ಕನ್ನಡಿಗರ ನೇಟಿವಿಟಿಗೆ ತಕ್ಕಂತೆ ಇದೆ ಎಂದು ಚಿತ್ರದ ನಾಯಕ ನಟ ರಾಕಿಂಗ್ ಸ್ಟಾರ್ ಯಶ್ ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದರು.
ಈ ಚಿತ್ರಕ್ಕೆ ಹಂಸಲೇಖ ಅವರ ಸಂಗೀತ ಇರುವುದು ಇನ್ನೊಂದು ಹೈಲೈಟ್. ಈ ಚಿತ್ರಕ್ಕೆ ಯಶ್ ಹುಲಿಯಾದರೆ ನಾನು ರಾಜ ಎಂದು ಚಿತ್ರದ ನಿರ್ಮಾಪಕ ಕೆ ಮಂಜು ಅವರು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಮಂಜು ಮಾಂಡವ್ಯ ಸಂಭಾಷಣೆ ಬರೆದಿದ್ದು ಮಂಡ್ಯ ಭಾಷೆಯನ್ನು ಬಳಸಿಕೊಳ್ಳಲಾಗಿದೆ.
ಯಶ್ ಅವರ ಹುಲಿಯಂತಹ ಕಲ್ಲಿಮೀಸೆ, ವಿಭಿನ್ನ ಗೆಟಪ್ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಅವರು ಇಲ್ಲಿಯವರೆಗೂ ಮಾಡದೇ ಇರುವಂತಹ ಪಾತ್ರ ಇದು ಎನ್ನುತ್ತಾರೆ ನಿರ್ದೇಶಕರು. ಚಿತ್ರಕ್ಕೆ ಹಂಸಲೇಖ ಅವರ ಸಂಗೀತ ಇರುವುದು ಚಿತ್ರದ ಬಗ್ಗೆ ಮತ್ತಷ್ಟು ನಿರೀಕ್ಷಿಸುವಂತಾಗಿದೆ.
ಇದೇ ಮೊದಲ ಸಲ ಯಶ್ ಗೆ ಸುಂದರ್ ರಾಜ್ ಹಾಗೂ ಪ್ರಮಿಳ ಜೋಸೈ ಅವರ ಪುತ್ರಿ ಮೇಘನ ರಾಜ್ ನಾಯಕಿ ಆಗಿದ್ದಾರೆ. ತಾರಾಗಣದಲ್ಲಿ ಚಿಕ್ಕಣ್ಣ, ಅಶ್ವಿನಿ ಚರಣ್ ರಾಜ್ ಮುಂತಾದವರು ಇದ್ದಾರೆ. (ಒನ್ಇಂಡಿಯಾ ಕನ್ನಡ)