Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೋಟೋ ವೈರಲ್: ಗಣೇಶನ ಅವತಾರದಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್ ಪುತ್ರ
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದಾದ ಮಕ್ಕಳ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತವೆ. ಪುತ್ರಿ ಐರಾ ಮತ್ತು ಜೂ.ಯಶ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಂತೆ ಕ್ಷಣಾರ್ಧದಲ್ಲಿ ವೈರಲ್ ಆಗುತ್ತೆ. ರಾಧಿಕಾ ಪಂಡಿತ್ ಆಗಾಗ ಮಕ್ಕಳ ಫೋಟೋವನ್ನು ಮತ್ತು ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ.
ಹಬ್ಬದ ಸಂದರ್ಭದಲ್ಲಿ ವಿಶೇಷವಾಗಿ ಮಾಡಿಸುವ ಫೋಟೋಶೂಟ್ ನೋಡಲು ಅಭಿಮಾನಿಗಳು ಕಾತರರಾಗಿರುತ್ತಾರೆ. ಇತ್ತೀಚಿಗೆ ಕೃಷ್ಣ ಜನ್ಮಾಷ್ಟಮಿ ದಿನ ರಾಧೆ ಕೃಷ್ಣ ಆಗಿ ಮಿಂಚಿದ್ದ ಯಶ್ ಮುದ್ದಾದ ಮಕ್ಕಳು ಎಲ್ಲರ ಗಮನ ಸೆಳೆದಿದ್ದರು.
ಟಾಪ್
50
ಮೋಸ್ಟ್
ಡಿಸೈರಬಲ್
ಮ್ಯಾನ್:
ಕನ್ನಡದವರು
ಒಬ್ಬರೇ,
ಎಷ್ಟನೇ
ಸ್ಥಾನ
ಇದೀಗ ಗೌರಿ ಗಣೇಶ ಹಬ್ಬದ ಸಂಭ್ರಮ. ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಣೆ ಮಾಡದಿದ್ದರೂ, ಸರಳವಾಗಿ ಮನೆಯಲ್ಲೇ ಎಲ್ಲರೂ ಆಚರಣೆ ಮಾಡಿದ್ದಾರೆ. ಪುಟ್ಟ ಗಣೇಶನ ಪೂಜಿಸಿ ಸಂಭ್ರಮಿಸಿದ್ದಾರೆ. ವಿಶೇಷ ಅಂದರೆ ರಾಕಿಂಗ್ ಸ್ಟಾರ್ ಯಶ್ ಪುತ್ರ ಗಣೇಶನ ಅವತಾರದಲ್ಲಿ ಮಿಂಚಿದ್ದಾನೆ. ಯಶ್ ಮಗನ ಫೋಟೋವನ್ನು ಗಣೇಶನ ರೀತಿ ಎಡಿಟ್ ಮಾಡಲಾಗಿದೆ.
ಪುಟ್ಟ ಗಣೇಶನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಕ್ಕದಲ್ಲಿ ಮೂಷಿಕನನ್ನು ಕೂರಿಸಿಕೊಂಡು, ಕೈಯಲ್ಲಿ ಮೋದಕ ಹಿಡಿದು ಕುಳಿತಿರುವ ಪುಟಾಣಿ ಗಣಪನಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಫೋಟೋವನ್ನು ಸ್ವತಹ ಯಶ್ ಶೇರ್ ಮಾಡಿ "ಸೂಪರ್ ನನ್ನ ಪುಟ್ಟ ಗಣೇಶ" ಎಂದು ಕ್ಯಾಪ್ಷನ್ ನೀಡಿದ್ದಾರೆ.
ಇನ್ನೂ ನಟ ಯಶ್ ಕೆಜಿಎಫ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ನಡೆಯಬೇಕಿದ್ದು ಹಬ್ಬದ ಬಳಿಕ ಚಿತ್ರತಂಡ ಚಿತ್ರೀಕರಣಕ್ಕೆ ಹೊರಡಲಿದೆ. ಕೊರೊನಾ ಬಳಿಕ ಈಗಾಗಲೆ ಸಾಕಷ್ಟು ಸಿನಿಮಾತಂಡ ಚಿತ್ರೀಕರಣ ಪ್ರಾರಂಭಮಾಡಿದೆ. ಇದೀಗ ಕೆಜಿಎಫ್-2 ತಂಡ ಕೂಡ ಚಿತ್ರೀಕರಣಕ್ಕೆ ಹೊರಡುವ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಸುಳಿವು ನೀಡಿದ್ದಾರೆ.