Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಚಂದ್ರನ್ 'ಕನ್ನಡಿಗ' ಸಿನಿಮಾದಲ್ಲಿ ರಾಕ್ ಲೈನ್ ವೆಂಕಟೇಶ್
ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ಬಹುನಿರೀಕ್ಷೆಯ ಕನ್ನಡಿಗ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ವೇಗವಾಗಿ ಚಿತ್ರೀಕರಣ ನಡೆಯುತ್ತಿದ್ದು, ಈಗಾಗಲೇ 80ರಷ್ಟು ಮುಕ್ತಾಯವಾಗಿದೆ. ವಿಭಿನ್ನ ಪಾತ್ರದಲ್ಲಿ ರವಿಚಂದ್ರನ್ ಕಾಣಿಸಿಕೊಳ್ಳುತ್ತಿದ್ದು, ಕ್ರೇಜಿ ಸ್ಟಾರ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ವಿಶೇಷ ಎಂದರೆ ಚಿತ್ರದಲ್ಲಿ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರವಿಚಂದ್ರನ್ ಗೆಳೆಯನ ಪಾತ್ರಕ್ಕೆ ರಾಕ್ ಲೈನ್ ಬಣ್ಣ ಹಚ್ಚಿದ್ದಾರೆ. ರಾಕ್ ಲೈನ್ ಮತ್ತು ರವಿಚಂದ್ರನ್ ಇಬ್ಬರು ಚಿತ್ರೀಕರಣ ಸೆಟ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜರ್ಮನ್ ಕನ್ನಡಿಗನನ್ನು ಭೇಟಿಯಾದ 'ಕನ್ನಡಿಗ' ರವಿಚಂದ್ರನ್
ಈ ಮೊದಲು ರವಿಚಂದ್ರನ್ ಮತ್ತ ರಾಕ್ ಲೈನ್ ವೆಂಕಟೇಶ್ ಇಬ್ಬರು ರಸಿಕ ಮತ್ತು ಪ್ರೀತ್ಸೋದ್ ತಪ್ಪಾ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಇದೀಗ ಮತ್ತೆ ಕನ್ನಡಿಗ ಸಿನಿಮಾ ಮೂಲಕ ಒಟ್ಟಿಗೆ ತೆರೆಮೇಲೆ ಬರ್ತಿದ್ದಾರೆ. ಇನ್ನೂ ಚಿತ್ರದ ಪ್ರಮುಖ ಪಾತ್ರದಲ್ಲಿ ನಿರ್ದೇಶಕ ಗುರುದತ್ ಸಹ ನಟಿಸುತ್ತಿದ್ದಾರೆ.
ಇತ್ತೀಚಿಗಷ್ಟೆ ಜೇಮಿ ಆಲ್ಟರ್ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಮೊದಲು ನಿಘಂಟು ಸಂಪಾದಿಸಿದ ರೆವರೆಂಡ್ ಫರ್ನಾಂಡಿಸ್ ಕಿಟ್ಟೆಲ್ ಪಾತ್ರದಲ್ಲಿ ಕೊಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಜೇಮಿ ಆಲ್ಟರ್ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಜೇಮಿ ಆಲ್ಟರ್ ಜೊತೆ ರವಿಚಂದ್ರನ್ ಇರುವ ಫೋಟೋ ವೈರಲ್ ಆಗಿತ್ತು.
Recommended Video
ಅಂದಹಾಗೆ 'ಕನ್ನಡಿಗ' ನಿರ್ದೇಶಕ ಬಿ ಎಂ ಗಿರಿರಾಜ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. 1858ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಆ ಕಾಲವನ್ನು ಮರುಸೃಷ್ಟಿ ಮಾಡಲಾಗಿದೆ. ಇಲ್ಲಿ ನಾಯಕಿಯಾಗಿ ಪಾವನಾ ನಟಿಸುತ್ತಿದ್ದಾರೆ. ಸಂಕಮ್ಮಬ್ಬೆಯಾಗಿ ಸ್ವಾನಿ ಚಂದ್ರಶೇಖರ್ ಕಾಣಿಸಿಕೊಂಡಿದ್ದಾರೆ, ಇನ್ನು ದತ್ತಣ್ಣ, ಅಚ್ಯುತ್ ಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.